
ಲಂಡನ್(ಆ.13): ಇಂಗ್ಲೆಂಡ್ ವಿರುದ್ಧ ಆರಂಭಿಕ 2 ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದೆ. ಹೀಗಾಗಿ 3ನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆಗಳಾಗೋ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕಳಪೆ ಪ್ರದರ್ಶನ ನೀಡಿರುವ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಬದಲು ಯುವ ಕ್ರಿಕೆಟಿಗ ರಿಷಬ್ ಪಂತ್ಗೆ ಅವಕಾಶ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ದಿನೇಶ್ ಕಾರ್ತಿ ಮೊದಲ ಪಂದ್ಯದಲ್ಲಿ 20 ರನ್ ಸಿಡಿಸಿದರೆ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 1 ರನ್ ಗಳಿಸಿದ್ದಾರೆ. ಇದು ದಿನೇಶ್ ಕಾರ್ತಿಕ್ ಕೊನೆಯ ಟೆಸ್ಟ್ ಪಂದ್ಯ, ಮುಂದಿನ ಪಂದ್ಯದಲ್ಲಿ ರಿಷಭ್ ಪಂತ್ ಪಾದರ್ಪಣೆ ಮಾಡಲಿದ್ದಾರೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿದೆ ಟ್ವಿಟರಿಗರ ಅಭಿಪ್ರಾಯ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.