
ನವದೆಹಲಿ(ಅ.17): ಗಾಯಾಳು ಶಾರ್ದೂಲ್ ಠಾಕೂರ್ ಬದಲಿಗೆ ವೆಸ್ಟ್ಇಂಡೀಸ್ ವಿರುದ್ಧ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಿಗೆ, ಭಾರತ ತಂಡದಲ್ಲಿ ಉಮೇಶ್ ಯಾದವ್ಗೆ ಸ್ಥಾನ ನೀಡಲಾಗಿದೆ. ವಿಂಡೀಸ್ ವಿರುದ್ಧ 2ನೇ ಟೆಸ್ಟ್ನಲ್ಲಿ 10 ವಿಕೆಟ್ ಕಿತ್ತು ಮಿಂಚಿದ ಉಮೇಶ್ಗೆ ಅವಕಾಶ ದೊರೆತಿದೆ.
ಈ ಮೊದಲು ಪ್ರಕಟಗೊಂಡಿದ್ದ ತಂಡದಲ್ಲಿ ಶಾರ್ದೂಲ್ ಸ್ಥಾನ ಪಡೆದಿದ್ದರು. ಆದರೆ ಹೈದರಾಬಾದ್ನಲ್ಲಿ ಟೆಸ್ಟ್ ಕ್ರಿಕೆಟ್ಗೆ ಕಾಲಿಟ್ಡ ಶಾರ್ದೂಲ್ ಕೇವಲ 10 ಎಸೆತ ಬೌಲ್ ಮಾಡಿ ತೊಡೆ ಸಂದು ಗಾಯಕ್ಕೆ ತುತ್ತಾಗಿದ್ದರು.
ಈ ವರ್ಷ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ನಲ್ಲಿ ನಡೆದಿದ್ದ ಪಂದ್ಯದ ಬಳಿಕ, ಉಮೇಶ್ ಏಕದಿನ ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಅ.21ರಂದು ಗುವಾಹಟಿಯಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.