ಜಮ್ಮು ಕಾಶ್ಮೀರದಲ್ಲಿ ಕ್ಯಾಪ್ಟನ್ ನಾಪತ್ತೆ: ಟೂರ್ನಿ ಆಡಲು ಆಟಗಾರರೇ ಇಲ್ಲ..!

Published : Aug 20, 2019, 04:33 PM IST
ಜಮ್ಮು ಕಾಶ್ಮೀರದಲ್ಲಿ ಕ್ಯಾಪ್ಟನ್ ನಾಪತ್ತೆ: ಟೂರ್ನಿ ಆಡಲು ಆಟಗಾರರೇ ಇಲ್ಲ..!

ಸಾರಾಂಶ

ಕಣಿವೆ ರಾಜ್ಯ ಜುಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ  ಸ್ಥಾನಮಾನವನ್ನು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಇದರ ಬಿಸಿ ಇದೀಗ ಕ್ರಿಕೆಟ್ ತಂಡದ ಮೇಲೂ ತಟ್ಟಿದೆ. ಇದರ ಪರಿಣಾಮ ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡದ ನಾಯಕ ಎಲ್ಲಿದ್ದಾರೆ ಎನ್ನುವುದೇ ಇನ್ನು ಪತ್ತೆಯಾಗಿಲ್ಲ. ಈ ಕುರಿತಾದ ವರದಿ ಇಲ್ಲಿದೆ ನೋಡಿ... 

ನವದೆಹಲಿ(ಆ.20): ಕೇಂದ್ರಾಡಳಿ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಸಂವಹನದ ಮೇಲೆ ನಿರ್ಬಂಧ ಹೇರಿದ್ದ ಕಾರಣ ತನ್ನ ಆಟಗಾರರನ್ನೇ ಸಂಪರ್ಕಿಸಲು ಸಾಧ್ಯವಾಗದೆ ಜಮ್ಮು ಕಾಶ್ಮೀರ ಕ್ರಿಕೆಟ್‌ ಸಂಸ್ಥೆ (ಜೆಕೆಸಿಎ) ವಿಝ್ಝಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದೆ. 

ಕಾಶ್ಮೀರದಲ್ಲಿ ಹೈಅಲರ್ಟ್; ಕಣಿವೆ ರಾಜ್ಯ ತೊರೆಯಲು ಇರ್ಫಾನ್‌ಗೆ ಸೂಚನೆ!

ಆಂಧ್ರ ಕ್ರಿಕೆಟ್‌ ಸಂಸ್ಥೆ ಆಯೋಜಿಸುತ್ತಿರುವ ವಿಝ್ಝಿ ಟ್ರೋಫಿ ಆ.22ರಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ. ‘ಕಣಿವೆಯಲ್ಲಿ ಸ್ಥಿತಿ ಸುಧಾರಿಸುತ್ತಿದೆ. ಆದರೆ ಆಟಗಾರರನ್ನು ಸಂಪರ್ಕಿಸುವುದೇ ಅತ್ಯಂತ ಸವಾಲಿನ ಸಂಗತಿಯಾಗಿದೆ. ಕಚೇರಿಯಲ್ಲಿ ಎಲ್ಲಾ ಆಟಗಾರರ ಮೊಬೈಲ್‌ ಸಂಖ್ಯೆಗಳಿವೆ. ಆದರೆ ಯಾರೂ ಸಂಪರ್ಕಕ್ಕೆ ಸಿಗುತ್ತಿಲ್ಲ. ನಾಯಕ ಪರ್ವೇಜ್‌ ರಸೂಲ್‌ ಎಲ್ಲಿದ್ದಾರೆಂದೇ ತಿಳಿಯುತ್ತಿಲ್ಲ’ ಎಂದು ಜೆಕೆಸಿಎ ಮುಖ್ಯಸ್ಥ ಬುಖಾರಿ ತಿಳಿಸಿದ್ದಾರೆ.

ಇಂಟರ್ನೆಟ್ ಸ್ಥಗಿತಗೊಳಿಸಿದ್ದರೂ, ಗಿಲಾನಿಗೆ ನೆಟ್ ಸೇವೆ: BSNL ಅಧಿಕಾರಿಗಳು ಅಮಾನತು!

ಕೇಂದ್ರ ಸರ್ಕಾರ ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ [ಆರ್ಟಿಕಲ್ 370] ರದ್ದು ಮಾಡಿದ ಬೆನ್ನಲ್ಲೇ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಯ ಮೇಲೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಜಮ್ಮು ಕಾಶ್ಮೀರ ಕ್ರಿಕೆಟ್‌ ಸಂಸ್ಥೆಗೆ ತಮ್ಮ ಆಟಗಾರರನ್ನು ಸಂಪರ್ಕಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ