ಅಂಡರ್ 19 ಟೀಂ ಇಂಡಿಯಾ ಚಾಂಪಿಯನ್ ಆದ ಬಳಿಕ ಕೋಚ್ ದ್ರಾವಿಡ್ ಹೇಳಿದ್ದೇನು..?

Published : Feb 03, 2018, 07:37 PM ISTUpdated : Apr 11, 2018, 01:10 PM IST
ಅಂಡರ್ 19 ಟೀಂ ಇಂಡಿಯಾ ಚಾಂಪಿಯನ್ ಆದ ಬಳಿಕ ಕೋಚ್ ದ್ರಾವಿಡ್ ಹೇಳಿದ್ದೇನು..?

ಸಾರಾಂಶ

ನಮ್ಮ ತಂಡದ ಸಾಧನೆ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ನಾವು ಕಳೆದ 14 ತಿಂಗಳಿನಿಂದ ಪಟ್ಟ ಶ್ರಮಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದಂತಾಗಿದೆ. ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ ನಮ್ಮ ಹುಡುಗರ ನಿಜಕ್ಕೂ ಅರ್ಹ ಎಂದು 'ದ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಬೆಂಗಳೂರು(ಫೆ.03): ಪೃಥ್ವಿ ಶಾ ನೇತೃತ್ವದ ಕಿರಿಯರ ಟೀಂ ಇಂಡಿಯಾ ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಿರಿಯರ ತಂಡ ಯಶಸ್ಸಿನ ಹಿಂದೆ ಕೋಚ್ ದ್ರಾವಿಡ್ ಪರಿಶ್ರಮವೂ ಸಾಕಷ್ಟಿದೆ. ಕಿರಿಯರ ತಂಡ ಚಾಂಪಿಯನ್ ಆದ ಬಳಿಕ ದ್ರಾವಿಡ್ ತಂಡದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ನಮ್ಮ ತಂಡದ ಸಾಧನೆ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ನಾವು ಕಳೆದ 14 ತಿಂಗಳಿನಿಂದ ಪಟ್ಟ ಶ್ರಮಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದಂತಾಗಿದೆ. ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ ನಮ್ಮ ಹುಡುಗರ ನಿಜಕ್ಕೂ ಅರ್ಹ ಎಂದು 'ದ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಈ ಕ್ಷಣ ಸಾಕಷ್ಟು ಕಾಲ ನಮ್ಮ ಹುಡುಗರಿಗೆ ಸ್ಮರಣೀಯವಾಗಿರಲಿದೆ. ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡುವ ಪ್ರತಿಭೆ ಈ ಕ್ರಿಕೆಟಿಗರಲ್ಲಿದ್ದು, ಉನ್ನತ ಹಂತಕ್ಕೆ ಹೋಗುವ ಕ್ಷಮತೆಯಿದೆ. ಏಳೆಂಟು ಮಂದಿ ಸಹಾಯಕ ಸಿಬ್ಬಂದಿ ತಂಡಕ್ಕೆ ಪೂರಕವಾಗಿ ಶ್ರಮಿಸಿದ್ದಾರೆ. ನಾನು ಇಂತಹ ಸಹಾಯಕ ಸಿಬ್ಬಂದಿಯ ಭಾಗವಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ವಾಲ್ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೂರ್ನಿಯಲ್ಲಿ ಏಳನೇ ಸೋಲು ಕಾಣುತ್ತಿದ್ದಂತೆಯೇ ಅಚ್ಚರಿ ಹೇಳಿಕೆ ಕೊಟ್ಟ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ!
ಸಿಕ್ಸ್‌, ಫೋರ್‌ ಸುರಿಮಳೆ ಸುರಿಸಿರೋ ವೈಭವ್‌ ಸೂರ್ಯವಂಶಿ; ಸಾಕ್ಷಿ ಸಮೇತ Unprofessional ಎಂದ ಜಿತೇಶ್‌ ಶರ್ಮಾ!