ಕೇರಳ ಬಿಟ್ಟು ಸೌರಾಷ್ಟ್ರ ಕಡೆ ಉತ್ತಪ್ಪ ಚಿತ್ತ..?

Published : Aug 05, 2017, 05:31 PM ISTUpdated : Apr 11, 2018, 12:50 PM IST
ಕೇರಳ ಬಿಟ್ಟು ಸೌರಾಷ್ಟ್ರ ಕಡೆ ಉತ್ತಪ್ಪ ಚಿತ್ತ..?

ಸಾರಾಂಶ

2002-03ರಲ್ಲಿ ಕರ್ನಾಟಕ ರಣಜಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಉತ್ತಪ್ಪ (2013-14, 14-15)ರ ರಣಜಿ ಪ್ರಶಸ್ತಿ ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸುಮಾರು 15 ವರ್ಷಗಳ ಕಾಲ ಕರ್ನಾಟಕ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದ ಉತ್ತಪ್ಪ ರಾಜ್ಯ ತಂಡ ತೊರೆಯಲು ಸಿದ್ಧವಾಗಿದ್ದಾರೆ.

ಬೆಂಗಳೂರು(ಆ.05): ಕನ್ನಡಿಗ ರಾಬಿನ್ ಉತ್ತಪ್ಪ ಈ ಬಾರಿಯ ರಣಜಿ ಋತುವಿನಲ್ಲಿ ಯಾವ ತಂಡದ ಪರ ಆಡಲಿದ್ದಾರೆ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

ಹೌದು ಕರ್ನಾಟಕ ರಣಜಿ ತಂಡದ ಆಧಾರಸ್ತಂಭವಾಗಿದ್ದ ಉತ್ತಪ್ಪ, ಈ ಮೊದಲು ಕೇರಳ ಪರ ಆಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಕೇರಳ ಕ್ರಿಕೆಟ್ ಸಂಸ್ಥೆ ಸಹ ಇದನ್ನು ಸ್ಪಷ್ಟಪಡಿಸಿತ್ತು.

ಆದರೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅವರು ಈ ಬಾರಿ ಸೌರಾಷ್ಟ್ರ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ 'ಕನ್ನಡಪ್ರಭ' ಅವರನ್ನು ಸಂಪರ್ಕಿಸಿದಾಗ ಇನ್ನೂ ಯಾವುದೂ ನಿರ್ಧಾರವಾಗಿಲ್ಲ ಎಂದು ಉತ್ತಪ್ಪ ಹೇಳಿದ್ದಾರೆ.

2002-03ರಲ್ಲಿ ಕರ್ನಾಟಕ ರಣಜಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಉತ್ತಪ್ಪ (2013-14, 14-15)ರ ರಣಜಿ ಪ್ರಶಸ್ತಿ ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸುಮಾರು 15 ವರ್ಷಗಳ ಕಾಲ ಕರ್ನಾಟಕ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದ ಉತ್ತಪ್ಪ ರಾಜ್ಯ ತಂಡ ತೊರೆಯಲು ಸಿದ್ಧವಾಗಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?