
ನವದೆಹಲಿ(ಮಾ.04): ಐಪಿಎಲ್ 11ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿ ವೆಂಕಟೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಶುಕ್ರವಾರವಷ್ಟೇ ಅವರು ಬಿಸಿಸಿಐ ಕಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಐಪಿಎಲ್ ಹುದ್ದೆಗೇರುವ ಉದ್ದೇಶದಿಂದ ಪ್ರಸಾದ್ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿತ್ತು.
ಪಂಜಾಬ್ ತಂಡದ ಚೀಪ್ ಮೆಂಟರ್ ಆಗಿ ವೀರೇಂದ್ರ ಸೆಹ್ವಾಗ್ ಕಾರ್ಯ ನಿರ್ವಹಿಸುತ್ತಿದ್ದು, ಬ್ರಾಡ್ ಹಾಗ್ ಮುಖ್ಯ ಕೋಚ್ ಆಗಿದ್ದಾರೆ. ಇದೇ ವೇಳೆ ಪ್ರಸಾದ್ ರಾಜೀನಾಮೆಯಿಂದ ತೆರವುಗೊಂಡಿರುವ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನವನ್ನು ಭಾರತದ ಮಾಜಿ ಆಫ್ ಸ್ಪಿನ್ನರ್ ಆಶಿಶ್ ಕಪೂರ್ ತುಂಬಲಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.