ಬೆಂಗಳೂರು ಪಂದ್ಯದಲ್ಲಿ ಗೇಲ್ ಕೈ ಬಿಟ್ಟಿದ್ದನ್ನು ಸಮರ್ಥಿಸಿದ ವೆಟ್ಟೋರಿ

Published : Apr 17, 2017, 01:16 PM ISTUpdated : Apr 11, 2018, 12:46 PM IST
ಬೆಂಗಳೂರು ಪಂದ್ಯದಲ್ಲಿ ಗೇಲ್ ಕೈ ಬಿಟ್ಟಿದ್ದನ್ನು ಸಮರ್ಥಿಸಿದ ವೆಟ್ಟೋರಿ

ಸಾರಾಂಶ

ಆರ್'ಸಿಬಿ ತಂಡ ಮಂಗಳವಾರ(ಏ.18) ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಸೆಣಸಲಿದೆ.

ಬೆಂಗಳೂರು(ಏ.17): ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ರೈಸಿಂಗ್ ಪುಣೆ ಸೂಪರ್‌'ಜೈಂಟ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಯ ಸ್ಫೋಟಕ ಬ್ಯಾಟ್ಸ್‌'ಮನ್ ಕ್ರಿಸ್‌ಗೇಲ್ ಅವರನ್ನು ತಂಡದಿಂದ ಕೈ ಬಿಟ್ಟು ಆಲ್ರೌಂಡರ್ ಶೇನ್ ವಾಟ್ಸನ್‌ರನ್ನು ಸೇರ್ಪಡೆಗೊಳಿಸಿಕೊಂಡಿದ್ದನ್ನು ಕೋಚ್ ಡೇನಿಯಲ್ ವೆಟ್ಟೋರಿ ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದಿನ ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ವೇಗದ ಬೌಲರ್‌ಗಳ ಕೊರತೆಯಿಂದಾಗಿ ಪಂದ್ಯವನ್ನು ಕೈಚೆಲ್ಲಬೇಕಾಗಿ ಬಂದಿತ್ತು. ಹೀಗಾಗಿ ಗೇಲ್ ಬದಲು ವಾಟ್ಸನ್ ಅವರನ್ನು ಆಡಿಸಿದ್ದಾಗಿ ವೆಟ್ಟೋರಿ ಹೇಳಿದ್ದಾರೆ.

ವಾಟ್ಸನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗಗಳಲ್ಲಿಯೂ ತಂಡಕ್ಕೆ ನೆರವಾಗಬಲ್ಲರು. ಟಿ20 ಟೂರ್ನಿಗಳಿಗೆ ವಾಟ್ಸನ್ ಸೂಕ್ತ ಆಟಗಾರರಾರೆನಿಸಿದ್ದಾರೆ.

ಕ್ರಿಸ್ ಗೇಲ್ ಇನ್ನು ಕೇವಲ ಮೂರು ರನ್ ಬಾರಿಸಿದರೆ ಟಿ20 ಕ್ರಿಕೆಟ್'ನಲ್ಲಿ 10 ಸಾವಿರ ರನ್ ಪೂರೈಸಿದ ಜಗತ್ತಿನ ಮೊದಲ ಕ್ರಿಕೆಟಿಗ ಎನ್ನುವ ಕೀರ್ತಿಗೆ ಭಾಜನವಾಗಲಿದ್ದಾರೆ. ಈ ಸಾಧನೆ ಬೆಂಗಳೂರಿನಲ್ಲಿ ನಡೆಯುವ ಪಂದ್ಯದಲ್ಲಿಯೇ ಸಾಕಾರವಾಗಲಿದೆ ಎನ್ನುವ ಆಶಾವಾದವನ್ನು ಆರ್'ಸಿಬಿ ಅಭಿಮಾನಿಗಳು ಇಟ್ಟುಕೊಂಡಿದ್ದರು. ಆದರೆ ಗೇಲ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

ಪುಣೆ ವಿರುದ್ಧದ ಪಂದ್ಯದಲ್ಲಿ 27ರನ್‌'ಗಳಿಂದ ಆರ್‌ಸಿಬಿ ಪಂದ್ಯವನ್ನು ಕೈಚೆಲ್ಲಿತ್ತು. ಇನ್ನು ಆರ್'ಸಿಬಿ ತಂಡ ಮಂಗಳವಾರ(ಏ.18) ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಸೆಣಸಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು, ಇಸ್ಲಾಮಾಬಾದ್‌ನಲ್ಲಿ ಕೋಲಾಹಲ
ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!