ರಣಜಿ ಕದನ: ಕರ್ನಾಟಕಕ್ಕೆ 5 ರನ್'ಗಳ ರೋಚಕ ಸೋಲು - ಫೈನಲ್ ಪ್ರವೇಶಿಸಿದ ವಿದರ್ಭ

Published : Dec 21, 2017, 11:59 AM ISTUpdated : Apr 11, 2018, 01:01 PM IST
ರಣಜಿ ಕದನ: ಕರ್ನಾಟಕಕ್ಕೆ 5 ರನ್'ಗಳ ರೋಚಕ ಸೋಲು - ಫೈನಲ್ ಪ್ರವೇಶಿಸಿದ ವಿದರ್ಭ

ಸಾರಾಂಶ

ವಿದರ್ಭ ಪರ ಮತ್ತೊಮ್ಮೆ ಮಿಂಚಿನ ದಾಳಿ ನಡೆಸಿದ ರಜನೀಶ್ ಗುರ್ಬಾನಿ 68/7 ವಿಕೆಟ್ ಕಬಳಿಸು ಮೂಲಕ ತಂಡದ ಗೆಲುವಿನ ರೂವಾರಿ ಎನಿಸಿದರು. ಸೆಮಿಫೈನಲ್ ಪಂದ್ಯದಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ ಗುರ್ಬಾನಿ ಪಂದ್ಯಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಕೋಲ್ಕತ(ಡಿ.21): ಕರ್ನಾಟಕ ತಂಡ ಫೈನಲ್ ಪ್ರವೇಶಿಸುವ ಕನಸು ಭಗ್ನವಾಗಿದೆ. ತೀವ್ರ ರೋಚಕತೆಯಿಂದ ಕೂಡಿದ್ದ ಸೆಮಿಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಕರ್ನಾಟಕ ಕೇವಲ 5 ರನ್'ಗಳಿಂದ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿದೆ. ವಿದರ್ಭ ಇದೇ ಮೊದಲ ಬಾರಿಗೆ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದ್ದು, ಇಂದೋರ್'ನಲ್ಲಿ ನಡೆಯಲಿರುವ ಫೈನಲ್'ನಲ್ಲಿ ಡೆಲ್ಲಿ ತಂಡವನ್ನು ಎದುರಿಸಲಿದೆ.

ರಜನೀಶ್ ಗುರ್ಬಾನಿ ಮಾರಕ ದಾಳಿಗೆ ತತ್ತರಿಸಿದ ವಿನಯ್ ಕುಮಾರ್ ಪಡೆ ನಾಲ್ಕರ ಘಟ್ಟದಲ್ಲಿ ನಿರಾಸೆ ಅನುಭವಿಸಿದೆ. ಕೊನೆಯ 3 ವಿಕೆಟ್'ಗೆ 87ರನ್ ಗಳಿಸಬೇಕಿದ್ದ ಕರ್ನಾಟಕ ನಾಯಕ ವಿನಯ್ ಕುಮಾರ್(36), ಅಭಿಮನ್ಯು ಮಿಥುನ್(33) ಹಾಗೂ ಶ್ರೇಯಸ್ ಗೋಪಾಲ್(24*) ಹೋರಾಟದ  ಹೊರತಾಗಿಯೂ ಕೇವಲ 5 ರನ್'ಗಳ ಅಂತರದಲ್ಲಿ ನಿರಾಸೆ ಅನುಭವಿಸಿದೆ.

ವಿದರ್ಭ ಪರ ಮತ್ತೊಮ್ಮೆ ಮಿಂಚಿನ ದಾಳಿ ನಡೆಸಿದ ರಜನೀಶ್ ಗುರ್ಬಾನಿ 68/7 ವಿಕೆಟ್ ಕಬಳಿಸು ಮೂಲಕ ತಂಡದ ಗೆಲುವಿನ ರೂವಾರಿ ಎನಿಸಿದರು. ಸೆಮಿಫೈನಲ್ ಪಂದ್ಯದಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ ಗುರ್ಬಾನಿ ಪಂದ್ಯಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್:

ವಿದರ್ಭ: 185&313

ಕರ್ನಾಟಕ: 301&192

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿರಾಟ್ ಕೊಹ್ಲಿ ಕಾಲೆಳೆದ ಸಂಜಯ್ ಮಂಜ್ರೇಕರ್‌ಗೆ ಚಾಟಿ ಬೀಸಿದ ಹರ್ಭಜನ್ ಸಿಂಗ್!
ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ