ಧ್ಯಾನ್ ಚಂದ್'ಗೆ ಭಾರತ ರತ್ನ ನೀಡಲು ಮನವಿ ಮಾಡಿದ ಗೊಯಲ್

Published : Jun 08, 2017, 05:30 PM ISTUpdated : Apr 11, 2018, 12:39 PM IST
ಧ್ಯಾನ್ ಚಂದ್'ಗೆ ಭಾರತ ರತ್ನ ನೀಡಲು ಮನವಿ ಮಾಡಿದ ಗೊಯಲ್

ಸಾರಾಂಶ

2013ರಲ್ಲಿ ಸಚಿನ್ ತೆಂಡುಲ್ಕರ್ ಅವರಿಗೆ ಭಾರತ ರತ್ನ ನೀಡುವಾಗಲೇ ಧ್ಯಾನ್ ಚಂದ್ ಅವರಿಗೂ ಈ ಅತ್ಯುನ್ನತ ಪ್ರಶಸ್ತಿ ನೀಡಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು.

ನವದೆಹಲಿ(ಜೂ.08): ಹಾಕಿ ದಿಗ್ಗಜ ಧ್ಯಾನ್‌ ಚಂದ್‌ಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಬೇಕೆಂದು ಕೇಂದ್ರ ಕ್ರೀಡಾ ಸಚಿವ ವಿಜಯ್‌ ಗೊಯಲ್‌, ಪ್ರಧಾನಿಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಖಚಿತ ಪಡಿಸಿದ ಕ್ರೇಂದ ಸಚಿವರು, ‘ಧ್ಯಾನ್‌ ಚಂದ್‌ ಅವರಿಗೆ ಭಾರತ ರತ್ನ ನೀಡುವುದು, ದೇಶಕ್ಕೆ ಅವರು ಸಲ್ಲಿಸಿದ ಸೇವೆಗೆ ಗೌರವ ಸಲ್ಲಿಸಿದಂತಾಗುತ್ತದೆ' ಎಂದಿದ್ದಾರೆ.

ಹಾಕಿ ಮಾಂತ್ರಿಕ ಧ್ಯಾನ್ ಚಂದ್ 1928, 1932 ಮತ್ತು 1936ರ ಓಲಂಪಿಕ್ಸ್'ನಲ್ಲಿ ಭಾರತಕ್ಕೆ ಸತತ ಮೂರು ಚಿನ್ನದ ಪದಕ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2013ರಲ್ಲಿ ಸಚಿನ್ ತೆಂಡುಲ್ಕರ್ ಅವರಿಗೆ ಭಾರತ ರತ್ನ ನೀಡುವಾಗಲೇ ಧ್ಯಾನ್ ಚಂದ್ ಅವರಿಗೂ ಈ ಅತ್ಯುನ್ನತ ಪ್ರಶಸ್ತಿ ನೀಡಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?