ವಿನಯ್‌ಗೆ ನಾಯಕತ್ವದಿಂದ ಕೊಕ್‌! ಮನೀಶ್‌ ಪಾಂಡೆ ನೂತನ ನಾಯಕ

Published : Sep 29, 2018, 10:56 AM IST
ವಿನಯ್‌ಗೆ ನಾಯಕತ್ವದಿಂದ ಕೊಕ್‌! ಮನೀಶ್‌ ಪಾಂಡೆ ನೂತನ ನಾಯಕ

ಸಾರಾಂಶ

ಶುಕ್ರವಾರ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಆಯ್ಕೆ ಸಮಿತಿ ಮುಂದಿನ 5 ಪಂದ್ಯಗಳಿಗೆ ತಂಡವನ್ನು ಪ್ರಕಟಗೊಳಿಸಿತು. ವಿಂಡೀಸ್‌ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಬಿಸಿಸಿಐ ಅಧ್ಯಕ್ಷರ ಇಲೆವೆನ್‌ ಪರ ಆಡಲು ಆಯ್ಕೆಯಾಗಿರುವ ಕಾರಣ, ಕರುಣ್‌ ನಾಯರ್‌, ಮಯಾಂಕ್‌ ಅಗರ್‌ವಾಲ್‌, ಪ್ರಸಿದ್ಧ್ ಕೃಷ್ಣಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. 

ಬೆಂಗಳೂರು(ಸೆ.29): ವಿಜಯ್‌ ಹಜಾರೆ ಏಕದಿನ ಟೂರ್ನಿಯಲ್ಲಿ ಸೋಲಿನ ಮೇಲೆ ಸೋಲು ಕಾಣುತ್ತಿರುವ ಕರ್ನಾಟಕ ತಂಡದಲ್ಲಿ ಭಾರೀ ಬದಲಾವಣೆಯಾಗಿದೆ. ರಾಜ್ಯ ತಂಡದ ನಾಯಕನ ಸ್ಥಾನವನ್ನು ವಿನಯ್‌ ಕುಮಾರ್‌ ಕಳೆದುಕೊಂಡಿದ್ದು, ಮನೀಶ್‌ ಪಾಂಡೆಗೆ ತಂಡ ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆ. ಕಳಪೆ ಪ್ರದರ್ಶನ ತೋರಿದ ಕಾರಣ ಹಿರಿಯ ಆಟಗಾರರಾದ ಸ್ಟುವರ್ಟ್‌ ಬಿನ್ನಿ ಹಾಗೂ ಸಿ.ಎಂ.ಗೌತಮ್‌ರನ್ನು ಮುಂದಿನ ಪಂದ್ಯಗಳಿಗೆ ಕೈಬಿಡಲಾಗಿದೆ.

ಶುಕ್ರವಾರ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಆಯ್ಕೆ ಸಮಿತಿ ಮುಂದಿನ 5 ಪಂದ್ಯಗಳಿಗೆ ತಂಡವನ್ನು ಪ್ರಕಟಗೊಳಿಸಿತು. ವಿಂಡೀಸ್‌ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಬಿಸಿಸಿಐ ಅಧ್ಯಕ್ಷರ ಇಲೆವೆನ್‌ ಪರ ಆಡಲು ಆಯ್ಕೆಯಾಗಿರುವ ಕಾರಣ, ಕರುಣ್‌ ನಾಯರ್‌, ಮಯಾಂಕ್‌ ಅಗರ್‌ವಾಲ್‌, ಪ್ರಸಿದ್ಧ್ ಕೃಷ್ಣಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಮಯಾಂಕ್‌, ವಿಂಡೀಸ್‌ ವಿರುದ್ಧ ಟೆಸ್ಟ್‌ ಸರಣಿಗೂ ಆಯ್ಕೆಯಾಗುವ ನಿರೀಕ್ಷೆ ಇದೆ. ಏಷ್ಯಾಕಪ್‌ ಆಡಿದ ಭಾರತ ತಂಡದಲ್ಲಿದ್ದ ಮನೀಶ್‌ ಪಾಂಡೆ, ಭಾನುವಾರ ನಡೆಯಲಿರುವ ವಿದರ್ಭ ವಿರುದ್ಧದ ಪಂದ್ಯದ ವೇಳೆಗೆ ತಂಡ ಕೂಡಿಕೊಳ್ಳಲಿದ್ದಾರೆ.

ತಂಡದ ವಿವರ: ಮನೀಶ್‌ ಪಾಂಡೆ (ನಾಯಕ), ವಿನಯ್‌ ಕುಮಾರ್‌, ಆರ್‌.ಸಮಥ್‌ರ್‍, ಅನಿರುದ್ಧ ಜೋಶಿ, ಪವನ್‌ ದೇಶಪಾಂಡೆ, ಕೆ.ಗೌತಮ್‌, ಶ್ರೇಯಸ್‌ ಗೋಪಾಲ್‌, ಅಭಿಮನ್ಯು ಮಿಥುನ್‌, ಕೌನೇನ್‌ ಅಬ್ಬಾಸ್‌, ಜೆ.ಸುಚಿತ್‌, ಅಭಿಷೇಕ್‌ ರೆಡ್ಡಿ, ಟಿ. ಪ್ರದೀಪ್‌, ನವೀನ್‌ ಎಂ.ಜಿ, ಶರತ್‌ ಬಿ.ಆರ್‌, ಶರತ್‌ ಶ್ರೀನಿವಾಸ್‌.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!