
ಉತ್ತರಪ್ರದೇಶ(ಸೆ.16): ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶ ಪಡೆದು ಮತ್ತೆ ಟೀಂ ಇಂಡಿಯಾದಿದ ದೂರ ಸರಿದಿರುವ ಆಲ್ರೌಂಡರ್ ಸುರೇಶ್ ರೈನಾ ಮತ್ತೆ ಕಮ್ಬ್ಯಾಕ್ ಮಾಡುತ್ತಿದ್ದಾರೆ.
ಬರೋಬ್ಬರಿ 1 ವರ್ಷಗಳ ಬಳಿಕ ಸುರೇಶ್ ರೈನಾ ಉತ್ತರ ಪ್ರದೇಶ ತಂಡ ಸೇರಿಕೊಂಡಿದ್ದಾರೆ. 2018-19ರ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಸುರೇಶ್ ರೈನಾ ಉತ್ತರ ಪ್ರದೇಶ ತಂಡವನ್ನ ಮುನ್ನಡೆಸಲಿದ್ದಾರೆ.
3 ವರ್ಷಗಳ ಬಳಿಕ ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡಿದ್ದ ಸುರೇಶ್ ರೈನಾ, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸರಿಯಾಗಿ ಅವಕಾಶವೇ ಸಿಗಲಿಲ್ಲ. ಇನ್ನು ಏಷ್ಯಾಕಪ್ ಟೂರ್ನಿಯಿಂದಲೂ ರೈನಾ ಹೊರಗುಳಿಯಬೇಕಾಯಿತು. ಇದೀಗ ವಿಜಯ್ ಹಜಾರೆ ಟೂರ್ನಿ ಮೂಲಕ ಮತ್ತೆ ಟೀಂ ಇಂಡಿಯಾಗೆ ಮರಳೋ ವಿಶ್ವಾಸದಲ್ಲಿದ್ದಾರೆ.
ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ 16 ಸದಸ್ಯರ ತಂಡ ಪ್ರಕಟಿಸಿದೆ. ಸುರೇಶ್ ರೈನಾ ನಾಯಕತ್ವ ವಹಿಸಿಕೊಂಡರೆ ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.