
ಲಂಡನ್(ಜೂ.11): ದೇಶದ ರಾಷ್ಟ್ರೀಕೃತ ಬ್ಯಾಂಕ್'ಗಳಿಗೆ ನೂರಾರು ಕೋಟಿ ವಂಚನೆ ಮಾಡಿ, ಇಂಗ್ಲೆಂಡ್'ನಲ್ಲಿ ಬೀಡುಬಿಟ್ಟಿರುವ ಉದ್ಯಮಿ ವಿಜಯ್ ಮಲ್ಯರನ್ನು ‘ಕಳ್ಳ... ಕಳ್ಳ...’ ಎಂದು ಗೇಲಿ ಮಾಡಿದ ಘಟನೆ ಓವಲ್ ಮೈದಾನದ ಹೊರಗೆ ನಡೆದಿದೆ.
ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ವೀಕ್ಷಿಸಲು ದ ಓವಲ್ ಕ್ರೀಡಾಂಗಣಕ್ಕೆ ಆಗಮಿಸಿದರು. ಈ ವೇಳೆ ಅವರನ್ನು ಕಂಡ ಕೆಲ ಪ್ರೇಕ್ಷಕರು ‘ಅಲ್ಲಿ ನೋಡಿ ಕಳ್ಳ, ಕಳ್ಳ.. ಕ್ರೀಡಾಂಗಣಕ್ಕೆ ಬರುತ್ತಿದ್ದಾನೆ’ ಎಂದು ಜೋರಾಗಿ ಕೂಗಿದರು. ಈ ಯಾವುದೇ ಪ್ರತಿಕ್ರಿಯೆ ನೀಡದೆ ಮಲ್ಯ ನೇರವಾಗಿ ಮೈದಾನ ಪ್ರವೇಶಿಸಿದರು.
ಕಳೆದ ಭಾನುವಾರ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಣೆಗೂ ಆಗಮಿಸಿ ಭಾರತೀಯ ಮಾಧ್ಯಮಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಆ ಬಳಿಕ ಮಾಧ್ಯಮಗಳಿಗೂ ಸೆಡ್ಡುಹೊಡೆದು ಟೀಂ ಇಂಡಿಯಾ ಆಡುವ ಎಲ್ಲಾ ಪಂದ್ಯಗಳಿಗೂ ಮೈದಾನಕ್ಕೆ ಹೋಗಿ ಭಾರತ ತಂಡವನ್ನು ಹುರಿದುಂಬಿಸುವುದಾಗಿ ತಿರುಗೇಟು ನೀಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.