ಗಾಯಗೊಂಡಿದ್ದ ಸರ್ಫರಾಜ್ ಖಾನ್'ಗೆ ಸ್ಫೂರ್ತಿ ತುಂಬಿದ್ದು ಯಾರು ಗೊತ್ತಾ..?

Published : Jan 06, 2018, 04:01 PM ISTUpdated : Apr 11, 2018, 12:35 PM IST
ಗಾಯಗೊಂಡಿದ್ದ ಸರ್ಫರಾಜ್ ಖಾನ್'ಗೆ ಸ್ಫೂರ್ತಿ ತುಂಬಿದ್ದು ಯಾರು ಗೊತ್ತಾ..?

ಸಾರಾಂಶ

ಮುಂಬೈ ಮೂಲದ ಯುವ ಕ್ರಿಕೆಟಿಗ ಸರ್ಫ'ರಾಜ್ ಖಾನ್ ಅವರನ್ನು ಆರ್'ಸಿಬಿ 1.75 ಕೋಟಿ ರುಪಾಯಿ ಕೊಟ್ಟು ಉಳಿಸಿಕೊಂಡಿದೆ. ಸರ್ಫರಾಜ್ 12 ಪಂದ್ಯಗಳನ್ನಾಡಿದ್ದು 29.5ರ ಸರಾಸರಿಯಲ್ಲಿ 177 ರನ್ ಬಾರಿಸಿದ್ದಾರೆ. ಆದರೆ ಅವರ ಸ್ಟ್ರೈಕ್'ರೇಟ್ 173.53 ಇದ್ದು, ಸ್ಫೋಟಕ ಬ್ಯಾಟಿಂಗ್ ನಡೆಸುವ ಕ್ಷಮತೆ ಹೊಂದಿದ್ದಾರೆ.

ಬೆಂಗಳೂರು(ಜ.06): ಕೊಹ್ಲಿಯ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಫ'ರಾಜ್, ಜಿಮ್‌'ನಲ್ಲಿ ಬೆವರಿಳಿಸಲು ಆರಂಭಿಸಿದರು. ಜತೆಗೆ ವೇಗವಾಗಿ ಓಡುವುದರ ಕಡೆಗೂ ಗಮನ ನೀಡಿದರು. ಆದರೆ 2017ರ ಐಪಿಎಲ್‌'ಗೂ ಮುನ್ನ ಗಾಯಗೊಂಡ ಅವರು 6 ತಿಂಗಳ ಕಾಲ ಕ್ರಿಕೆಟ್‌'ನಿಂದ ದೂರ ಉಳಿಯಬೇಕಾಯಿತು. ಶಸ್ತ್ರಚಿಕಿತ್ಸೆಗೆ ಒಳಗಾದ ಸರ್ಫರಾಜ್, ಚೇತರಿಸಿಕೊಳ್ಳುತ್ತಿದ್ದ ವೇಳೆ ವಿರಾಟ್ ಕೊಹ್ಲಿಯಿಂದ ಬಂದ ಸಂದೇಶವೊಂದು ಅವರಿಗೆ ಸ್ಫೂರ್ತಿ ತುಂಬಿತಂತೆ.

‘ಗಾಯಗೊಂಡು ಮಲಗಿದ್ದಾಗ ಕೊಹ್ಲಿ ನನಗೆ ಸಂದೇಶವೊಂದನ್ನು ಕಳುಹಿಸಿದ್ದರು. ನಿನ್ನನ್ನು ನೀನು ಅರ್ಥ ಮಾಡಿಕೊಳ್ಳಲು ಇದು ಸರಿಯಾದ ಸಮಯ. ಚಿಂತೆ ಮಾಡಬೇಡ, ಬೇಗ ಗುಣವಾಗುತ್ತೀಯ. ಪ್ರತಿಯೊಂದು ಗಾಯವೂ ನಮ್ಮನ್ನು ಮಾನಸಿಕವಾಗಿ ಇನ್ನಷ್ಟು ಗಟ್ಟಿಯಾಗಿಸುತ್ತದೆ. ನಿನಗೆ ಒಳ್ಳೆಯದಾಗುತ್ತದೆ ಎಂದು ಕೊಹ್ಲಿ ಬರೆದಿದ್ದರು. ಅವರ ಸಂದೇಶ ನನ್ನ ಆತ್ಮವಿಶ್ವಾಸ ಹೆಚ್ಚಿಸಿತು’ ಎಂದು ಸರ್ಫರಾಜ್ ಹೇಳಿದ್ದಾರೆ.

ಮುಂಬೈ ಮೂಲದ ಯುವ ಕ್ರಿಕೆಟಿಗ ಸರ್ಫ'ರಾಜ್ ಖಾನ್ ಅವರನ್ನು ಆರ್'ಸಿಬಿ 1.75 ಕೋಟಿ ರುಪಾಯಿ ಕೊಟ್ಟು ಉಳಿಸಿಕೊಂಡಿದೆ. ಸರ್ಫರಾಜ್ 12 ಪಂದ್ಯಗಳನ್ನಾಡಿದ್ದು 29.5ರ ಸರಾಸರಿಯಲ್ಲಿ 177 ರನ್ ಬಾರಿಸಿದ್ದಾರೆ. ಆದರೆ ಅವರ ಸ್ಟ್ರೈಕ್'ರೇಟ್ 173.53 ಇದ್ದು, ಸ್ಫೋಟಕ ಬ್ಯಾಟಿಂಗ್ ನಡೆಸುವ ಕ್ಷಮತೆ ಹೊಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ