
ಕೊಲಂಬೊ(ಮಾ.17): ತ್ರಿಕೋನ ಟಿ೨೦ ಸರಣಿಯಿಂದ ವಿಶ್ರಾಂತಿ ಪಡೆದು, ಪತ್ನಿ ಅನುಷ್ಕಾ ಶರ್ಮಾ ಜತೆ ಸಮಯ ಕಳೆಯುತ್ತಿರುವ ವಿರಾಟ್ ಕೊಹ್ಲಿಗೆ ಶ್ರೀಲಂಕಾ ಕ್ರೀಡಾ ಸಚಿವ ದಯಸಿರಿ ಜಯಶೇಖರ, ಲಂಕಾಗೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ.
‘ಕೊಹ್ಲಿಯನ್ನು ನಾನು ಇಲ್ಲಿ ಕ್ರಿಕೆಟ್ ಆಡುವಂತೆ ಕೇಳುತ್ತಿಲ್ಲ. ಬದಲಾಗಿ ಪತ್ನಿ ಜತೆ ಇಲ್ಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ,ಆನಂದಿಸಿ ಎಂದು ಕೇಳಿಕೊಳ್ಳುತ್ತಿದ್ದೇನೆ’ ಎಂದಿದ್ದಾರೆ. ನಾನು ಕೊಹ್ಲಿಯ ದೊಡ್ಡ ಅಭಿಮಾನಿಯಾಗಿದ್ದು, ಕಳೆದ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾಗ ನಾನು ಕೊಲಂಬೊ ಟೆಸ್ಟ್ ಪಂದ್ಯವನ್ನು ಮೈದಾನಕ್ಕೆ ಹೋಗಿ ಕೊಹ್ಲಿ ಬ್ಯಾಟಿಂಗ್ ಕಣ್ತುಂಬಿಕೊಂಡಿದ್ದೇನೆಂದು ಹೇಳಿದ್ದಾರೆ.
ಭಾರತ ತಂಡವು ಲಂಕಾ ಪ್ರವಾಸದಲ್ಲಿದ್ದು, ನಿದಾಸ್ ತ್ರಿಕೋನ ಟಿ20 ಸರಣಿಯಲ್ಲಿ ಫೈನಲ್ ಪ್ರವೇಶಿಸಿದ್ದು, ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.