
ನವದೆಹಲಿ(ಡಿ.11): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾರ ಮದುವೆ ವದಂತಿಗೆ ದಿನಕ್ಕೊಂದು ರೆಕ್ಕೆ ಪುಕ್ಕ ಸೇರುತ್ತಿದ್ದು, ಇದೀಗ ವಿವಾಹಕ್ಕೆ ಕೇವಲ ಸಚಿನ್ ತೆಂಡುಲ್ಕರ್ ಹಾಗೂ ಯುವರಾಜ್ ಸಿಂಗ್'ಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂಬ ಗುಸುಗುಸು ಶುರುವಾಗಿದೆ.
ವಿರಾಟ್ ಕೇವಲ ಅತಿ ಆಪ್ತರಗಷ್ಟೇ ವಿವಾಹಕ್ಕೆ ಆಹ್ವಾನ ನೀಡಿದ್ದು, ಕುಟುಂಬಸ್ಥರು ಹಾಗೂ ಬಾಲ್ಯದ ಗೆಳೆಯರು ಹಾಜರಿರಲಿದ್ದಾರೆ ಎನ್ನಲಾಗಿದ್ದು, ಕ್ರಿಕೆಟಿಗರಲ್ಲಿ ಟೀಂ ಇಂಡಿಯಾ ದಿಗ್ಗಜ ಸಚಿನ್ ತೆಂಡುಲ್ಕರ್ ಹಾಗೂ ಯುವರಾಜ್ ಸಿಂಗ್ ಅವರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ವರದಿಯಾಗಿದೆ.
ಡಿ.12ರಂದು ಇಟಲಿಯಲ್ಲಿ ವಿರಾಟ್-ಅನುಷ್ಕಾ ಮದುವೆ ನೆರವೇರಲಿದ್ದು, ಇಬ್ಬರ ಕುಟುಂಬದ ಸಂಬಂಧಿಕರು, ಆಪ್ತರು ಈಗಾಗಲೇ ಅಲ್ಲಿಗೆ ತಲುಪಿದ್ದಾರೆ ಎನ್ನಲಾಗಿದೆ. ಇನ್ನು ಡಿ.21/22 ರಂದು ಮುಂಬೈನಲ್ಲಿ ಅದ್ಧೂರಿ ಅರತಕ್ಷತೆಯಿರಲಿದ್ದು ತಾರಾ ಜೋಡಿಯನ್ನು ಹರಸಲು ಟೀಂ ಇಂಡಿಯಾ ಕ್ರಿಕೆಟಿಗರು ಹಾಗೂ ಬಾಲಿವುಡ್ ಸೆಲಿಬ್ರಿಟಿಗಳು ಹಾಜರಿರಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.