ವಿರಾಟ್ ಕೊಹ್ಲಿಗೆ 5ನೇ ಬಾರಿಗೆ ಪಾಲಿ ಉಮ್ರಿಗರ್ ಪ್ರಶಸ್ತಿ

Published : Jun 13, 2018, 02:23 PM IST
ವಿರಾಟ್ ಕೊಹ್ಲಿಗೆ 5ನೇ ಬಾರಿಗೆ ಪಾಲಿ ಉಮ್ರಿಗರ್ ಪ್ರಶಸ್ತಿ

ಸಾರಾಂಶ

ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. 2016-17 ಹಾಗೂ 2017-18ರ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪ್ರಶಸ್ತಿ ಪಡೆದ ಟೀಂ ಇಂಡಿಯಾ ಕ್ರಿಕೆಟ್ ಸಾಧಕರು ಯಾರು? ಇಲ್ಲಿದೆ ವಿವರ.

ಬೆಂಗಳೂರು(ಜೂನ್.13): ಟೀಂ ಇಂಡಿಯಾ ಹಾಗೂ ದೇಸಿ ಕ್ರಿಕೆಟ್‌ನಲ್ಲಿ ಸಾಧನೆ ಮಾಡಿದ ಕ್ರಿಕೆಟಿಗರಿಗೆ ಬಿಸಿಸಿಐ ಪ್ರಶಸ್ತಿ ಪ್ರಧಾನ ಮಾಡಿತು. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ, ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರು ವಾರ್ಷಿಕ ಪ್ರಶಸ್ತಿ ಪಡೆದು ಸಂಭ್ರಮಿಸಿದರು.

2016-17 ಹಾಗೂ 2017-18ರ ಸಾಲಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಾಯಕ ವಿರಾಟ್ ಕೊಹ್ಲಿ ವರ್ಷದ ಶ್ರೇಷ್ಠ ಕ್ರಿಕೆಟಿಗ ಪಾಲಿ ಉಮ್ರಿಗರ್ ಪ್ರಶಸ್ತಿ ಪಡೆದರು. ಈ ಮೂಲಕ 5 ಬಾರಿ ಪಾಲಿ ಉಮ್ರಿಗರ್ ಪ್ರಶಸ್ತಿ ಪಡೆದ ಸಾಧನೆ ಮಾಡಿದರು.

ಅಂಶುಮಾನ್ ಗಾಯಕ್ವಾಡ್ ಹಾಗೂ ಮಹಿಳಾ ಕ್ರಿಕೆಟರ್ ಸುಧಾ ಶಾ, ಜೀವಮಾನ ಶ್ರೇಷ್ಠ ಸಾಧನೆಗೆ ನೀಡುವ ಸಿಕೆ ನಾಯ್ಡು ಪ್ರಶಸ್ತಿ ಪಡೆದರು. ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಜಲಜ್ ಸಕ್ಸೇನಾ ಹಾಗೂ ಪರ್ವೇಜ್ ರಸೂಲ್ ಆಲ್‌ರೌಂಡರ್ ಆಟಗಾರ ಪ್ರಶಸ್ತಿ ಪಡೆದರು. ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರುನಾಲ್ ಪಾಂಡ್ಯಾಗೂ ಪ್ರಶಸ್ತಿ ಸಿಕ್ಕಿದೆ. ಆದರೆ ಪಾಂಡ್ಯ ಭಾರತ ಎ ತಂಡದ ಜೊತೆ ಇಂಗ್ಲೆಂಡ್ ಪ್ರವಾಸದಲ್ಲಿರೋ ಕಾರಣ ಸಮಾರಂಭಕ್ಕೆ ಗೈರಾಗಿದ್ದರು.

2017-18ರ ಸಾಲಿನ ರಣಜಿ ಟ್ರೋಫಿಯಲ್ಲಿ ಗರಿಷ್ಠ ರನ್ ಸಿಡಿಸಿದ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಮಾಧವ್ ರಾವ್ ಸಿಂಧಿಯಾ ಪ್ರಶಸ್ತಿ ನೀಡಲಾಯಿತು. ಕಳೆದ ವರ್ಷ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಫೈನಲ್ ಹಾದಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಹರ್ಮನ್‌ಪ್ರೀತ್ ಕೌರ್‌ ಹಾಗೂ ಸ್ಮೃತಿ ಮಂದನಾಗೆ ಶ್ರೇಷ್ಠ ಆಟಗಾರ್ತಿ ಪ್ರಶಸ್ತಿ ನೀಡಲಾಯಿತು.

ಸಮಾರಂಭದ  ಪ್ರಮುಖ ಅಟ್ರಾಕ್ಶನ್ ಎಂದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ. ಬಿಸಿಸಿಐ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ಈ ಜೋಡಿ, ಎಲ್ಲರ ಕೇಂದ್ರಬಿಂದುವಾಗಿದ್ದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?