
ಮುಂಬೈ(ಅ.22): ಹಿರಿಯ ಸ್ಪಿನ್ನರ್'ಗಳಾದ ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ‘ವಿಶ್ರಾಂತಿ’ ನೀಡಿದ್ದೇವೆ ಅವರಿಗೆ ಕೊಕ್ ನೀಡಿಲ್ಲ ಎನ್ನುವ ಬಿಸಿಸಿಐ ವಾದವನ್ನು ಕೊಹ್ಲಿ ಸಮರ್ಥಿಸಿಕೊಂಡಿದ್ದಾರೆ.
‘ಅಂತರಾಷ್ಟ್ರೀಯ ಮಟ್ಟದಲ್ಲಿ ಆಡಲು ಸಾಮರ್ಥ್ಯವಿರುವ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡುತ್ತಿದ್ದೇವೆ. 2019ರ ವಿಶ್ವಕಪ್'ಗೆ ಅತ್ಯುತ್ತಮ ಸಂಯೋಜನೆ ರಚಿಸುವ ದೃಷ್ಟಿಯಿಂದ ಈ ರೀತಿಯ ಪ್ರಯೋಗಗಳು ತುಂಬಾ ಮುಖ್ಯ. ಅಶ್ವಿನ್ ಹಾಗೂ ಜಡೇಜಾ ಕಳೆದ 6-7 ವರ್ಷಗಳಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಹೀಗಾಗಿ ಅವರಿಗೆ ವಿಶ್ರಾಂತಿ ಅಗತ್ಯವಿದೆ’ ಎಂದು ಕೊಹ್ಲಿ ಹೇಳಿದ್ದಾರೆ.
ಅಶ್ವಿನ್-ಜಡೇಜಾ ಅನುಪಸ್ಥಿತಿಯಲ್ಲಿ ಯುವ ಸ್ಪಿನ್ನರ್'ಗಳಾದ ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ ಅದ್ಭುತ ಪ್ರದರ್ಶನ ತೋರುತ್ತಿರುವುದು ಹಿರಿಯ ಸ್ಪಿನ್ನರ್ ಟೀಂ ಇಂಡಿಯಾ ಪ್ರವೇಶದ ಹಾದಿ ಕಠಿಣವಾಗಿದೆ ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.