ಸೌರವ್ ಗಂಗೂಲಿ ದಾಖಲೆ ಮುರಿದ ವಿರಾಟ್!

Published : Aug 12, 2019, 11:21 AM IST
ಸೌರವ್ ಗಂಗೂಲಿ ದಾಖಲೆ ಮುರಿದ ವಿರಾಟ್!

ಸಾರಾಂಶ

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ 120 ರನ್ ಸಿಡಿಸೋ ಮೂಲಕ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆ ಮುರಿದಿದ್ದಾರೆ. ಜಾವೇದ್ ಮಿಯಾಂದಾದ್  ಹಾಗೂ ರಿಕಿ ಪಾಂಟಿಂಗ್ ದಾಖಲೆ ಮುರಿದ ಬೆನ್ನಲ್ಲೇ, ಸೌರವ್ ಗಂಗೂಲಿ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. 

ಟ್ರಿನಿಡಾಡ್(ಆ.12): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಸೆಂಚುರಿ, ಶ್ರೇಯಸ್ ಅಯ್ಯರ್ ಹಾಫ್ ಸೆಂಚುರಿ ಹಾಗೂ ಭುವನೇಶ್ವರ್ ಕುಮಾರ್ ಬೌಲಿಂಗ್  ದಾಳಿಯಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ  ವಿರಾಟ್ ಕೊಹ್ಲಿ ಹಲವು ದಿಗ್ಗಜರ ದಾಖಲೆಯನ್ನು ಪುಡಿ ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಇದೀಗ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. 

ಇದನ್ನೂ ಓದಿ:  INDvWI 2ನೇ ಏಕದಿನ: ಸೆಂಚುರಿ ಸಿಡಿಸಿ ಪಾಂಟಿಂಗ್ ದಾಖಲೆ ಮುರಿದ ಕೊಹ್ಲಿ!

ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 42ನೇ ಶತಕ ಪೂರೈಸಿದ್ದಾರೆ. 120 ರನ್ ಸಿಡಿಸೋ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 11406 ರನ್ ಪೂರೈಸಿದರು.  ಸೌರವ್ ಗಂಗೂಲಿ ಏಕದಿನ ಕ್ರಿಕೆಟ್‌ನ 311 ಪಂದ್ಯಗಳಿಂದ 11363 ರನ್ ಸಿಡಿಸಿದ್ದಾರೆ. ಕೊಹ್ಲಿ ಇದೀಗ 238 ಪಂದ್ಯಗಳಲ್ಲಿ ಗಂಗೂಲಿ ದಾಖಲೆ ಮುರಿದಿದ್ದಾರೆ. ವಿಂಡೀಸ್ ವಿರುದ್ಧ ಅಬ್ಬರಿಸಿದ ಕೊಹ್ಲಿ, ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಹಾಗೂ ಆಸ್ಟ್ರೇಲಿಯಾ ನಾಯಕ ರಿಕಿ ಪಾಂಟಿಂಗ್ ದಾಖಲೆನ್ನೂ ಮುರಿದಿದ್ದಾರೆ.

ಇದನ್ನೂ ಓದಿ:  ಪಾಕಿಸ್ತಾನ ದಿಗ್ಗಜ ಕ್ರಿಕೆಟಿಗನ ದಾಖಲೆ ಮುರಿದ ವಿರಾಟ್ ಕೊಹ್ಲಿ!

ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸಿಡಿಸಿದ ಕ್ರಿಕೆಟಿಗ ಪೈಕಿ ವಿರಾಟ್ ಕೊಹ್ಲಿ 8ನೇ ಸ್ಥಾನ ಅಲಂಕರಿಸಿದ್ದಾರೆ.  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸಿಡಿಸಿದ ಸಾಧಕರು:

ಬ್ಯಾಟ್ಸ್‌ಮನ್

ರನ್ಪಂದ್ಯ
ಸಚಿನ್ ತೆಂಡುಲ್ಕರ್18426463
ಕುಮಾರ ಸಂಗಕ್ಕಾರ14234404
ರಿಕಿ ಪಾಂಟಿಂಗ್13704375
ಸನತ್ ಜಯಸೂರ್ಯ13430445
ಮಹೇಲಾ ಜಯವರ್ದನೆ12650448
ಇನ್ಜಮಾನ್ ಉಲ್ ಹಕ್11739378
ಜ್ಯಾಕ್ ಕಾಲಿಸ್11579328
ವಿರಾಟ್ ಕೊಹ್ಲಿ11406238
ಸೌರವ್ ಗಂಗೂಲಿ11363311
ರಾಹುಲ್ ದ್ರಾವಿಡ್10889344

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ