
ಕೊಲಂಬೊ(ಆ.08): ಚೇತೇಶ್ವರ್ ಪೂಜಾರ ಪ್ರಸ್ತುತ ಟೀಂ ಇಂಡಿಯಾದ ಶ್ರೇಷ್ಠ ಟೆಸ್ಟ್ ಬ್ಯಾಟ್ಸ್'ಮನ್ ಎಂದು ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
'ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ನಮ್ಮ ತಂಡದ ಶ್ರೇಷ್ಠ ಬ್ಯಾಟ್ಸ್'ಮನ್'ಗಳು. ಇಬ್ಬರೂ ಸಹ ಸ್ಥಿರ ಪ್ರದರ್ಶನ ತೋರುತ್ತಾ ಬಂದಿದ್ದಾರೆ. ಅದರಲ್ಲೂ ಪೂಜಾರ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲೇಬೇಕು ಎಂದು ಕೊಹ್ಲಿ ಹೇಳಿದ್ದಾರೆ.
ಕೇವಲ ಟೆಸ್ಟ್ ಮಾದರಿಯಲ್ಲಿ ಭಾರತವನ್ನು ಪೂಜಾರ ಅವರ ರನ್ ದಾಹ ಹಾಗೂ ತಂಡದ ಯಶಸ್ಸಿಗೆ ಹೆಚ್ಚು ಕೊಡುಗೆ ನೀಡಬೇಕು ಎನ್ನುವ ಅವರ ಶ್ರಮ ಪ್ರತಿಯೊಬ್ಬರಿಗೂ ಮಾದರಿ. ಸೀಮಿತ ಓವರ್ ಕ್ರಿಕೆಟ್ ನಡೆಯುವಾಗ ತಂಡದಿಂದ ದೂರವಿದ್ದು ಬಳಿಕ ಮತ್ತೆ ತಂಡ ಕೂಡಿಕೊಂಡು ಸ್ಥಿರ ಪ್ರದರ್ಶನ ನೀಡುವುದು ಸಾಮಾನ್ಯವಾದ ಕೆಲಸವಲ್ಲ' ಎಂದು ಕೊಹ್ಲಿ ಹೇಳಿದ್ದಾರೆ.
ಇದೇವೇಳೆ ವೃದ್ದಿಮಾನ್ ಸಾಹ ಟೆಸ್ಟ್ ಟೀಂ ಇಂಡಿಯಾದ ಶ್ರೇಷ್ಠ ಕೀಪರ್ ಎಂದು ಕೊಹ್ಲಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.