
ಬೆಂಗಳೂರು: 12ನೇ ಆವೃತ್ತಿಯ ಐಪಿಎಲ್ಗೆ ಕೇವಲ 4 ದಿನ ಮಾತ್ರ ಬಾಕಿ ಇದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯಾದರೂ ಪ್ರಶಸ್ತಿ ಗೆಲ್ಲುವ ಕನಸು ಕಾಣುತ್ತಿದೆ.
ಸೋಮವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಂಡದ ನಾಯಕ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸಿದರು. ತಾವು ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿರುವ ಫೋಟೋಗಳನ್ನು ಟ್ವೀಟರ್ನಲ್ಲಿ ಹಾಕಿರುವ ವಿರಾಟ್, ‘ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮರಳಿರುವುದಕ್ಕೆ ಖುಷಿಯಾಗುತ್ತಿದೆ. ಮೈದಾನಕ್ಕಿಳಿದು ಆಟ ಆರಂಭಿಸಲು ಉತ್ಸುಕನಾಗಿದ್ದೇನೆ’ ಎಂದು ಬರೆದಿದ್ದಾರೆ.
ಮಾ.23ರಂದು ಐಪಿಎಲ್ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲೇ ಆರ್ಸಿಬಿ ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ.
ಮತ್ತೊಬ್ಬ ಅಭಿಮಾನಿ ಜತೆ ಧೋನಿ ಜೂಟಾಟ!
ಆರ್’ಸಿಬಿ ಪಂದ್ಯಗಳು ಹೀಗಿವೆ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.