
ನವದೆಹಲಿ(ಜೂ.19): ಭಾರತ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಅವರನ್ನು ಮುಂದುವರಿಸುವುದು ನಾಯಕ ವಿರಾಟ್ ಕೊಹ್ಲಿಗೆ ಇಷ್ಟವಿಲ್ಲ. ಇಬ್ಬರ ನಡುವಿನ ಸಂಬಂಧ ಸರಿಪಡಿಸಲು ಸಾಧ್ಯವಾಗದಷ್ಟು ಹದಗೆಟ್ಟಿದೆ ಎಂದು ‘ ದ ಡೈಲಿ ಟೆಲಿಗ್ರಾಫ್’ ಪತ್ರಿಕೆ ವರದಿ ಮಾಡಿದೆ.
ಇವರಿಬ್ಬರ ನಡುವೆ ಸಂಧಾನ ನಡೆಸಲು ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ ಸಕಲ ಪ್ರಯತ್ನ ನಡೆಸುತ್ತಿದ್ದು, ವಿರಾಟ್ ಕೊಹ್ಲಿ ಜತೆ ಸಭೆ ನಡೆಸಲಾಯಿತು ಎನ್ನಲಾಗಿದ್ದು, ಈ ವೇಳೆ ಕೊಹ್ಲಿ ಕುಂಬ್ಳೆ ಮುಂದುವರಿಯುವುದು ತಮಗಂತೂ ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಕ್ರಿಕೆಟ್ ಸಲಹಾ ಸಮಿತಿ ಸದಸ್ಯರು ಹಾಗೂ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಸದ್ಯದಲ್ಲೇ ಕುಂಬ್ಳೆ ಅವರನ್ನು ಭೇಟಿ ಮಾಡಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.
ಇದೇವೇಳೆ ತಂಡದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಅವರನ್ನು ಟೀಂ ಇಂಡಿಯಾ ಕೋಚ್ ಮಾಡಲು ನಾಯಕ ವಿರಾಟ್ ಕೊಹ್ಲಿ ಒಲವು ಹೊಂದಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ವೆಸ್ಟ್'ಇಂಡಿಸ್ ಸರಣಿವರೆಗೆ ಕುಂಬ್ಳೆ ಅವರನ್ನೇ ಮುಂದುವರೆಸಲು ಕ್ರಿಕೆಟ್ ಸಲಹಾ ಸಮಿತಿ ತೀರ್ಮಾನಿದೆ. ಕೆರಿಬಿಯನ್ ಪ್ರವಾಸದ ಬಳಿಕ ನೂತನ ಕೋಚ್ ಆಯ್ಕೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಕುಂಬ್ಳೆ, ವಿರೇಂದ್ರ ಸೆಹ್ವಾಗ್, ಟಾಮ್ ಮೂಡಿ ಸೇರಿದಂತೆ ಒಟ್ಟು 6 ಮಂದಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.