
ನವದೆಹಲಿ(ಸೆ.20): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ವಿಶ್ವ ಚಾಂಪಿಯನ್ ವೇಟ್ಲಿಫ್ಟರ್ ಮೀರಾ ಬಾಯಿ ಚಾನುಗೆ ಖೇಲ್ ರತ್ನ ನೀಡಲು ಕೇಂದ್ರ ಕ್ರೀಡಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ.
ದ್ರೋಣಾಚಾರ್ಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಆರ್ಚರಿ ಕೋಚ್ ಜೀವನ್ಜೋತ್ ತೇಜಾ ಒಬ್ಬರನ್ನು ಬಿಟ್ಟು, ಆಯ್ಕೆ ಸಮಿತಿ ಖೇಲ್ ರತ್ನ, ಅರ್ಜುನ ಹಾಗೂ ಧ್ಯಾನ್ಚಂದ್ ಪ್ರಶಸ್ತಿ ಗೆ ಶಿಫಾರಸು ಮಾಡಿದ್ದ ಎಲ್ಲರಿಗೂ ಪ್ರಶಸ್ತಿ ನೀಡಲು ಒಪ್ಪಿಗೆ ಸಿಕ್ಕಿದೆ.
2015ರ ವಿಶ್ವ ಯುನಿವರ್ಸಿಟಿ ಗೇಮ್ಸ್ ವೇಳೆ ಅಸಭ್ಯ ವರ್ತನೆ ತೋರಿ ನಿಷೇಧಕ್ಕೆ ಗುರಿಯಾಗಿದ್ದರು ಎನ್ನುವ ಕಾರಣಕ್ಕೆ ತೇಜಾಗೆ ಪ್ರಶಸ್ತಿ ನೀಡದಿರಲು ಸಚಿವಾಲಯ ನಿರ್ಧರಿಸಿದೆ. ಸೆ.25ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.