ಕೊಹ್ಲಿ ವಿರುದ್ಧ ತಿರುಗಿಬಿದ್ಧ ಟೀಂ ಇಂಡಿಯಾ ಮಾಜಿ ನಾಯಕ..!

Published : Dec 20, 2018, 02:17 PM IST
ಕೊಹ್ಲಿ ವಿರುದ್ಧ ತಿರುಗಿಬಿದ್ಧ ಟೀಂ ಇಂಡಿಯಾ ಮಾಜಿ ನಾಯಕ..!

ಸಾರಾಂಶ

2ನೇ ಟೆಸ್ಟ್‌ನಲ್ಲಿ ಭಾರತ ತಂಡ ಸ್ಪಿನ್ನರ್‌ಗಳನ್ನು ಬದಿಗಿಟ್ಟು 4 ವೇಗಿಗಳೊಂದಿಗೆ ಕಣಕ್ಕಿಳಿದಿತ್ತು. ಆದರೆ ಪಂದ್ಯದಲ್ಲಿ ಆಸೀಸ್ ಸ್ಪಿನ್ನರ್ ನೇಥನ್ ಲಯನ್ ನಿರ್ಣಾಯಕ ಪಾತ್ರ ವಹಿಸಿದ್ದರು. 

ಪರ್ತ್[ಡಿ.20]: ‘ನಾಯಕ ಕೊಹ್ಲಿಯ ತಪ್ಪು ಆಯ್ಕೆಗಳೇ, ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಭಾರತ ತಂಡದ ಸೋಲಿಗೆ ಕಾರಣ’ ಎಂದು ಭಾರತದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ.

#INDvAUS ಕೊನೆಯ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ!

2ನೇ ಟೆಸ್ಟ್‌ನಲ್ಲಿ ಭಾರತ ತಂಡ ಸ್ಪಿನ್ನರ್‌ಗಳನ್ನು ಬದಿಗಿಟ್ಟು 4 ವೇಗಿಗಳೊಂದಿಗೆ ಕಣಕ್ಕಿಳಿದಿತ್ತು. ಆದರೆ ಪಂದ್ಯದಲ್ಲಿ ಆಸೀಸ್ ಸ್ಪಿನ್ನರ್ ನೇಥನ್ ಲಯನ್ ನಿರ್ಣಾಯಕ ಪಾತ್ರ ವಹಿಸಿದ್ದರು. ‘ಮೆಲ್ಬರ್ನ್ ಮತ್ತು ಸಿಡ್ನಿ ಟೆಸ್ಟ್‌ಗಳಲ್ಲಿಯೂ ಭಾರತ ತಂಡ ಗೆಲುವು ಸಾಧಿಸುವಲ್ಲಿ ವಿಫಲವಾದರೆ, ಸದ್ಯ ಇರುವ ನಾಯಕ ಕೊಹ್ಲಿ, ಕೋಚ್ ರವಿಶಾಸ್ತ್ರಿ ಮತ್ತು ಸಹಾಯಕ ಸಿಬ್ಬಂದಿಯಿಂದ ಏನಾದರೂ ಲಾಭವಾಗುತ್ತಿದೆಯೇ ಎಂದು ಗವಾಸ್ಕರ್ ಹೇಳಿದ್ದಾರೆ.

ಪರ್ತ್ ಟೆಸ್ಟ್: ಆಸಿಸ್’ಗೆ ಶರಣಾದ ಟೀಂ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಅಡಿಲೇಡ್ ಟೆಸ್ಟ್ ಪಂದ್ಯ ಗೆದ್ದು ಶುಭಾರಂಭ ಮಾಡಿತ್ತು. ಬಳಿಕ ಪರ್ತ್’ನಲ್ಲಿ ನಡೆದ ಎರಡನೇ ಟೆಸ್ಟ್’ನಲ್ಲಿ ಆಸ್ಟ್ರೇಲಿಯಾ 146 ರನ್’ಗಳಿಂದ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿದೆ. ಪರ್ತ್ ಟೆಸ್ಟ್’ನಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನೇಥನ್ ಲಯನ್ 8 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದರು. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದಿಂದ ಡಿಸೆಂಬರ್ 26 ರಿಂದ ಆರಂಭಗೊಳ್ಳಲಿದೆ. ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಲಿದೆ.

ಭಾರತ ವಿರುದ್ಧದ ಅಂತಿಮ 2 ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?