ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಆಯ್ಕೆಗಾರ ಆಗಬೇಕು: ಸೆಹ್ವಾಗ್‌!

Published : Aug 22, 2019, 11:21 AM ISTUpdated : Aug 22, 2019, 11:31 AM IST
ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಆಯ್ಕೆಗಾರ ಆಗಬೇಕು: ಸೆಹ್ವಾಗ್‌!

ಸಾರಾಂಶ

ಟೀಂ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಪರ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಬ್ಯಾಟ್ ಬೀಸಿದ್ದಾರೆ. ಕುಂಬ್ಳೆ ಸೆಲೆಕ್ಷನ್ ಕಮಿಟಿಯಲಲ್ಲಿದ್ದರೆ, ಸಮಸ್ಯೆಗಳು ಉದ್ಭವವಾಗುವುದಿಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ.

ನವದೆಹಲಿ(ಆ.22):  ಭಾರತ ಕ್ರಿಕೆಟ್‌ ತಂಡದ ಆಯ್ಕೆಗಾರನಾಗಿ ಮಾಜಿ ನಾಯಕ ಅನಿಲ್‌ ಕುಂಬ್ಳೆಯನ್ನು ನೇಮಿಸಬೇಕು ಎಂದು ವೀರೇಂದ್ರ ಸೆಹ್ವಾಗ್‌ ಅಭಿಪ್ರಾಯಿಸಿದ್ದಾರೆ. ಇಲ್ಲಿ ಬುಧವಾರ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೆಹ್ವಾಗ್‌, ‘ಆಟಗಾರರ ಆತ್ಮವಿಶ್ವಾಸ ಹೆಚ್ಚಿಸುವ ಸಾಮರ್ಥ್ಯ ಹೊಂದಿರುವ ಮಾಜಿ ನಾಯಕ ಅನಿಲ್‌ ಕುಂಬ್ಳೆ ಆಯ್ಕೆಗಾರನಾಗಲು ಸೂಕ್ತ ವ್ಯಕ್ತಿ ಎಂದಿದ್ದಾರೆ.

ಇದನ್ನೂ ಓದಿ: ಸೆಲೆಕ್ಟರ್ ಆಗಲು ಹೊರಟ ಸೆಹ್ವಾಗ್‌; ಅಭಿಮಾನಿಗಳಿಂದ ಟ್ರೋಲ್!

ನಾನು 2007-08ರಲ್ಲಿ ತಂಡಕ್ಕೆ ಮರಳಿದಾಗ ಕುಂಬ್ಳೆ ನಾಯಕರಾಗಿದ್ದರು. ಮುಂದಿನ 2 ಸರಣಿಗೆ ತಂಡದಿಂದ ನಿಮ್ಮನ್ನು ಕೈಬಿಡುವುದಿಲ್ಲವೆಂದು ಆತ್ಮವಿಶ್ವಾಸ ತುಂಬಿದ್ದರು. ಆಟಗಾರರಿಗೆ ಈ ರೀತಿ ಆತ್ಮವಿಶ್ವಾಸ ಹೆಚ್ಚಿಸುವ ವ್ಯಕ್ತಿಗಳ ಅವಶ್ಯಕತೆ ಇದೆ’ ಎಂದು ಸೆಹ್ವಾಗ್‌ ಹೇಳಿದರು. ಇದೇ ವೇಳೆ ಆಯ್ಕೆಗಾರರ ವೇತನವನ್ನು ಬಿಸಿಸಿಐ ಹೆಚ್ಚಿಸಬೇಕು ಎಂದು ಸೆಹ್ವಾಗ್‌ ಕೇಳಿಕೊಂಡರು. ಸದ್ಯ ರಾಷ್ಟ್ರೀಯ ತಂಡದ ಆಯ್ಕೆಗಾರನಿಗೆ ಬಿಸಿಸಿಐ ವಾರ್ಷಿಕ  1 ಕೋಟಿ ರೂಪಾಯಿ ವೇತನ ನೀಡಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವ ಭಾರತೀಯನೂ ಮಾಡದ ಅಪರೂಪದ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ!
ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ