
ದೆಹಲಿ(ಜು.18): ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯ ಸೋಲೋ ಮೂಲಕ ಭಾರತ ಸರಣಿ ಸೋತಿದೆ. 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿಗೆ ಹಲವು ಕಾರಣಗಳಿವೆ. ಮಾಜಿ ಕ್ರಿಕೆಟಿಗ ವಿರೇಂದ್ರೆ ಸೆಹ್ವಾಗ್ ತಂಡದ ಸೋಲಿಗೆ ಯಾರು ಕಾರಣ ಅನ್ನೋದನ್ನ ಹೇಳಿದ್ದಾರೆ.
ಭಾರತ ಬ್ಯಾಟಿಂಗ್ ಮುಗಿಸಿದ ತಕ್ಷಣವೇ ಸೆಹ್ವಾಗ್ ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ್ದರು. ಭಾರತದ ಗೆಲುವಿಗೆ 290 ಅಥವಾ 300 ರನ್ ಅವಶ್ಯಕ ಎಂದಿದ್ದರು. ಇದೀಗ ಸೋಲಿನ ಬಳಿಕ, ಭಾರತ ತಂಡ ಎಡವಿದ್ದೆಲ್ಲಿ ಅನ್ನೋದನ್ನ ಹೇಳಿದ್ದಾರೆ.
ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿಗೆ ಬ್ಯಾಟ್ಸ್ಮನ್ಗಳೇ ಪ್ರಮುಖ ಕಾರಣ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಎಂ ಎಸ್ ಧೋನಿ ಹಾಗೂ ದಿನೇಶ್ ಕಾರ್ತಿಕ್ ಜವಾಬ್ದಾರಿ ನಿರ್ವಹಿಸಬೇಕಿತ್ತು. ಇವರಲ್ಲಿ ಯಾರಾದರೊಬ್ಬರು ರನ್ ವೇಗ ಹೆಚ್ಚಿಸಬೇಕಿತ್ತು. ಆದರೆ ಎಲ್ಲರೂ ಪೆವಿಲಿಯನ್ ಸೇರಿಕೊಂಡರು ಎಂದು ವೀರೂ ಹೇಳಿದ್ದಾರೆ.
ಧೋನಿ ಔಟಾಗಿದ್ದು 46ನೇ ಓವರ್ನಲ್ಲಿ. ಧೋನಿ ಕ್ರೀಸ್ನಲ್ಲಿರುವಾಗ ಭಾರತದ ರನ್ ವೇಗ ಹೆಚ್ಚಲಿಲ್ಲ. ಸಾಮಾನ್ಯವಾಗಿ ಧೋನಿ ಕ್ರೀಸ್ನಲ್ಲಿದ್ದರೆ, ಎದುರಾಳಿಗಳ ಆತ್ಮವಿಶ್ವಾಸ ಕಡಿಮೆಯಾಗುತ್ತೆ. ಆದರೆ ಧೋನಿ ಬ್ಯಾಟಿಂಗ್ ಎದುರಾಳಿಗಳಿಗೆ ಮೇಲುಗೈ ತಂದುಕೊಟ್ಟಿತು ಎಂದಿದ್ದಾರೆ.
ಭಾರತ ಬ್ಯಾಟಿಂಗ್ ವೈಫಲ್ಯವೇ ಸೋಲಿಗೆ ಕಾರಣ. 2ನೇ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ಎಚ್ಚೆತ್ತುಕೊಳ್ಳಲಿಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ. ಮುಂಬರುವ ವಿಶ್ವಕಪ್ ಟೂರ್ನಿಯ ದೃಷ್ಟಿಯಿಂದ ಟೀಂ ಇಂಡಿಯಾ ಈ ಅಂಶಗಳನ್ನ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.