ಕೋಚ್ ಸ್ಥಾನ ಸಿಗದ ಸೆಹ್ವಾಗ್ ಈಗ ಎಲ್ಲಿದ್ದಾರೆ ಗೊತ್ತಾ..?

Published : Jul 14, 2017, 03:58 PM ISTUpdated : Apr 11, 2018, 01:01 PM IST
ಕೋಚ್ ಸ್ಥಾನ ಸಿಗದ ಸೆಹ್ವಾಗ್ ಈಗ ಎಲ್ಲಿದ್ದಾರೆ ಗೊತ್ತಾ..?

ಸಾರಾಂಶ

ಕ್ರಿಕೆಟ್ ನಿವೃತ್ತಿಯ ಬಳಿಕ ಟ್ವಿಟರ್ ಹಾಗೂ ವೀಕ್ಷಕ ವಿವರಣೆಯಲ್ಲಿ ಸಕ್ರಿಯವಾಗಿದ್ದ ವೀರೂ, ಇದೇ ಮೊದಲ ಬಾರಿಗೆ ಟಿವಿ ನಿರೂಪಣೆ ಮೂಲಕ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ.

ನವದೆಹಲಿ(ಜು.14): ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದ ವಿರೇಂದ್ರ ಸೆಹ್ವಾಗ್ ಅವಕಾಶ ವಂಚಿತರಾಗಿದ್ದು, ಇದೀಗ ಅವರು ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ.

ಹೌದು ರವಿಶಾಸ್ತ್ರಿಯನ್ನು ಟೀಂ ಇಂಡಿಯಾ ಕೋಚ್ ಆಗಿ ಬಿಸಿಸಿಐ ಘೋಷಿಸುತ್ತಿದ್ದಂತೆ, ವೀರೂ ಕೆನಡಾಗೆ ಪ್ರವಾಸ ಹೋಗಿದ್ದಾರೆ. ತಾವು ಕೆನಡಾದಲ್ಲಿ ಮೋಜು ಮಾಡುತ್ತಿರುವುದಾಗಿ ಸಾಮಾಜಿಕ ಜಾಲತಾಣವಾದ ಇನ್'ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಕೆನಡಾದಿಂದ ವಾಪಾಸ್ಸಾದ ಬಳಿಕ ಖಾಸಗಿ ಚಾನೆಲ್'ವೊಂದರಲ್ಲಿ 'ಉಮ್ಮೀದ್ ಇಂಡಿಯಾ' ಎನ್ನುವ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಕ್ರಿಕೆಟ್ ನಿವೃತ್ತಿಯ ಬಳಿಕ ಟ್ವಿಟರ್ ಹಾಗೂ ವೀಕ್ಷಕ ವಿವರಣೆಯಲ್ಲಿ ಸಕ್ರಿಯವಾಗಿದ್ದ ವೀರೂ, ಇದೇ ಮೊದಲ ಬಾರಿಗೆ ಟಿವಿ ನಿರೂಪಣೆ ಮೂಲಕ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?