ಕುಲಭೂಷಣ್ ಪರ ಐಸಿಜೆ ತೀರ್ಪಿನ ಬಗ್ಗೆ ವೀರೂ ಹೇಳಿದ್ದೇನು...?

Published : May 18, 2017, 08:22 PM ISTUpdated : Apr 11, 2018, 12:38 PM IST
ಕುಲಭೂಷಣ್ ಪರ ಐಸಿಜೆ ತೀರ್ಪಿನ ಬಗ್ಗೆ ವೀರೂ ಹೇಳಿದ್ದೇನು...?

ಸಾರಾಂಶ

11 ಮಂದಿ ನ್ಯಾಯಾಧೀಶರಿದ್ದ ಬೆಂಚ್'ನಿಂದ ತೀರ್ಪು ಹೊರಬೀಳುತ್ತಿದ್ದಂತೆ ವಿರೇಂದ್ರ ಸೆಹ್ವಾಗ್ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಸತ್ಯಮೇವ ಜಯತೆ ಎಂದು ಟ್ವೀಟ್ ಮಾಡಿದ್ದಾರೆ.

ನವದೆಹಲಿ(ಮೇ.18): ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ನೇಣಿಗೇರಿಸುವ ಪಾಕಿಸ್ತಾನದ ತೀರ್ಮಾನಕ್ಕೆ ತಡೆಯಾಜ್ಞೆ ಹೇರಿರುವ  ಅಂತರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ್ನು ಟೀಂ ಇಂಡಿಯಾ ಮಾಜಿ ಆಟಗಾರ ಸ್ವಾಗತಿಸಿದ್ದಾರೆ.

11 ಮಂದಿ ನ್ಯಾಯಾಧೀಶರಿದ್ದ ಬೆಂಚ್'ನಿಂದ ತೀರ್ಪು ಹೊರಬೀಳುತ್ತಿದ್ದಂತೆ ವಿರೇಂದ್ರ ಸೆಹ್ವಾಗ್ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಸತ್ಯಮೇವ ಜಯತೆ ಎಂದು ಟ್ವೀಟ್ ಮಾಡಿದ್ದಾರೆ.

 ಇದಾದ ಬಳಿಕ ಪಾಕ್ ಮೂಲದ ವ್ಯಕ್ತಿಯೋರ್ವ ಜಾಧವ್ ಅವರನ್ನು ಖಂಡಿತ ಗಲ್ಲಿಗೇರಿಸುತ್ತೇವೆ ಎಂದು ಮಾಡಿದ ಟ್ವೀಟ್'ಗೆ ಭರ್ಜರಿಯಾಗಿಯೇ ಸಿಕ್ಸರ್ ಬಾರಿಸಿರುವ ಸೆಹ್ವಾಗ್, ಜಾಧವ್ ಅವರನ್ನು ಗಲ್ಲಿಗೇರಿಸುವುದು, ವಿಶ್ವಕಪ್ ಟೂರ್ನಿಯಲ್ಲಿ ಭಾರತವನ್ನು ಪಾಕಿಸ್ತಾನ ಮಣಿಸುವುದು ಎರಡೂ ಕನಸು. ಅದೆಂದಿಗೂ ನನಸಾಗಲು ಸಾಧ್ಯವಿಲ್ಲ ಎಂದು ಮುಲ್ತಾನಿನ ಸುಲ್ತಾನ  ಹೇಳಿದ್ದಾರೆ

ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನದ ಅಧಿಕಾರಿಗಳು ಮೇ 2016ರಲ್ಲಿ ಭಾರತದ ಪರ ಪಾಕಿಸ್ತಾನದಲ್ಲಿ ಗುಪ್ತಚಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪದಡಿ ಬಂಧಿಸಲಾಗಿದೆ. ಆ ಬಳಿಕ ಪಾಕಿಸ್ತಾನ ಮಿಲಿಟರಿ ಕೋರ್ಟ್ ಕಳೆದ ತಿಂಗಳಷ್ಟೇ ಜಾಧವ್ ಅವರನ್ನು ಗಲ್ಲಿಗೇರಿಸಲು ಆದೇಶ ಹೊರಡಿಸಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ ದಾಖಲೆ, ಜಾರ್ಖಂಡ್‌ ವಿರುದ್ಧ 413 ರನ್‌ ಬೆನ್ನಟ್ಟಿ ಗೆದ್ದ ಕರ್ನಾಟಕ!
ವಿಜಯ್ ಹಜಾರೆ ಟ್ರೋಫಿ ಕಮ್‌ಬ್ಯಾಕ್‌ ಪಂದ್ಯದಲ್ಲಿ ಶತಕ ಚಚ್ಚಿದ ಕಿಂಗ್ ಕೊಹ್ಲಿ! ವಿರಾಟ್‌ಗಿದು ಕಳೆದ 4 ಪಂದ್ಯಗಳಲ್ಲಿ 3ನೇ ಶತಕ