ಸಂಸಾರ ಚೆನ್ನಾಗಿರಬೇಕು ಅಂದ್ರೆ ಏನ್ ಮಾಡ್ಬೇಕು..?

Published : Jun 28, 2017, 06:35 PM ISTUpdated : Apr 11, 2018, 12:35 PM IST
ಸಂಸಾರ ಚೆನ್ನಾಗಿರಬೇಕು ಅಂದ್ರೆ ಏನ್ ಮಾಡ್ಬೇಕು..?

ಸಾರಾಂಶ

ವೀರೇಂದ್ರ ಸೆಹ್ವಾಗ್ ಹಾಗೂ ರವಿಶಾಸ್ತ್ರಿ ಸದ್ಯ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ರೇಸ್‌'ನಲ್ಲಿರುವವರಲ್ಲಿ ಪ್ರಮುಖರಾಗಿದ್ದಾರೆ.

ನವದೆಹಲಿ(ಜೂ.28): ಕ್ರಿಕೆಟ್'ಗೆ ವಿದಾಯ ಹೇಳಿದರೂ ಸದಾ ಒಂದಿಲ್ಲೊಂದು ಟ್ವೀಟ್ ಮೂಲಕ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ವಿರೇಂದ್ರ ಸೆಹ್ವಾಗ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.

ಹೌದು ವೀರೂ, ವಿವಾಹಿತ ಪುರುಷರಿಗೆ ತಮ್ಮ ಸಂಸಾರ ಸುಖವಾಗಿಟ್ಟುಕೊಳ್ಳಲು ಸಿಂಪಲ್ ಸೂತ್ರವೊಂದನ್ನು ನೀಡಿದ್ದಾರೆ.

‘ಹೆಂಡತಿ ಸುಖವಾಗಿದ್ದರೆ, ಜೀವನ ಸುಖವಾಗಿರುತ್ತದೆ’ ಎಂದು ಬರೆದು ತಾವು ಹಾಗೂ ತಮ್ಮ ಪತ್ನಿ ಜತೆಗಿರುವ ಫೋಟೊವೊಂದನ್ನು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟ್ರೆಂಡ್ ಆಗಿದ್ದು, ವೀರೂ ಸಲಹೆಗೆ ಬಹುತೇಕರು ಹೌದೆಂದು ತಲೆಯಾಡಿಸಿದ್ದಾರೆ.

ವೀರೇಂದ್ರ ಸೆಹ್ವಾಗ್ ಹಾಗೂ ರವಿಶಾಸ್ತ್ರಿ ಸದ್ಯ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ರೇಸ್‌'ನಲ್ಲಿರುವವರಲ್ಲಿ ಪ್ರಮುಖರಾಗಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?