
ನವದೆಹಲಿ(ಜ.14): ದ.ಆಫ್ರಿಕಾ ವಿರುದ್ಧದ 2ನೇ ಟೆಸ್ಟ್'ಗೆ ಭಾರತ ತಂಡದ ಆಯ್ಕೆ ಕುರಿತು ಭಾರತ ತಂಡದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದೊಮ್ಮೆ ಈ ಟೆಸ್ಟ್'ನಲ್ಲಿ ವಿರಾಟ್ ಕೊಹ್ಲಿ ವಿಫಲಗೊಂಡರೆ, ಮುಂದಿನ ಪಂದ್ಯದಲ್ಲಿ ಹೊರಗುಳಿಯುವರೇ ಎಂದು ಸೆಹ್ವಾಗ್ ಪ್ರಶ್ನಿಸಿದ್ದಾರೆ. ‘ಕೇವಲ ಒಂದು ಟೆಸ್ಟ್'ನಲ್ಲಿ ವಿಫಲಗೊಂಡಿದ್ದಕ್ಕೆ ಕೊಹ್ಲಿ, ಧವನ್'ರನ್ನು ಕೈಬಿಟ್ಟಿದ್ದಾರೆ. ಭುವನೇಶ್ವರ್'ರನ್ನು ಕೈ ಬಿಡಲು ಕಾರಣ ಏನೆಂಬುದು ತಿಳಿಯುತ್ತಿಲ್ಲ. ಒಂದೊಮ್ಮೆ 2ನೇ ಟೆಸ್ಟ್'ನಲ್ಲಿ ವಿಫಲಗೊಂಡರೆ ಕೊಹ್ಲಿ, ಮುಂದಿನ ಪಂದ್ಯದಲ್ಲಿ ಬೆಂಚ್ ಕಾಯುವರೇ’ ಎಂದಿದ್ದಾರೆ.
ಗಾಯದ ಸಮಸ್ಯೆಯಿಂದಾಗಿ ವೃದ್ದಿಮಾನ್ ಸಾಹಾ ಬದಲಿಗೆ ಪಾರ್ಥಿವ್ ಪಟೇಲ್ ಸ್ಥಾನಗಿಟ್ಟಿಸಿಕೊಂಡಿದ್ದಾರೆ.
ಸತತ 9 ಟೆಸ್ಟ್ ಸೀರಿಸ್ ಗೆದ್ದು ದಾಖಲೆ ಬರೆದಿರುವ ಟೀಂ ಇಂಡಿಯಾ ದಕ್ಷಿಣ ವಿರುದ್ಧ 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಕೇಪ್'ಟೌನ್ ಪಂದ್ಯವನ್ನು ಕೈಚೆಲ್ಲಿ 0-1ರ ಹಿನ್ನಡೆಯಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.