
ನವದೆಹಲಿ(ಆ.12): ಆಕ್ಸಿಜನ್ ಪೂರೈಕೆ ಕೊರತೆಯಿಂದ ಗೋರಖ್'ಪುರದ ಬಾಬಾ ರಾಘವ್'ದಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ 63 ಮಕ್ಕಳು ಸಾವನಪ್ಪಿರುವ ಮನಕಲುಕುವ ಘಟನೆಗೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕಂಬನಿ ಮಿಡಿದಿದ್ದಾರೆ.
ಮೆದುಳು ಜ್ವರದಿಂದ ಮೃತಪಟ್ಟ ಅಮಾಯಕ ಮಕ್ಕಳ ಬಗ್ಗೆ ಸಂತಾಪ ಸೂಚಿಸಿರುವ ಸೆಹ್ವಾಗ್, ಈ ಮಹಾಮಾರಿ ಕಾಣಿಸಿಕೊಂಡು 50 ಸಾವಿರಕ್ಕೂ ಹೆಚ್ಚು ಮಕ್ಕಳು ಅಸುನೀಗಿದರೂ ಚಿಕಿತ್ಸೆ ಕಂಡುಹಿಡಿಯದೇ ಇರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ ಎಂಬರ್ಥದಲ್ಲಿ ಡೆಲ್ಲಿ ಕ್ರಿಕೆಟಿಗ ಟ್ವೀಟ್ ಮಾಡಿದ್ದಾರೆ.
ಹೀಗಿದೆ ಸೆಹ್ವಾಗ್ ಮಾಡಿರುವ ಟ್ವೀಟ್...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.