
ನವದೆಹಲಿ(ಮೇ.18): ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ತಯಾರಿ ಆರಂಭಿಸಿದೆ. 2015ರಲ್ಲಿ ಸೆಮಿಫೈನಲ್ ಸುತ್ತಿನಲ್ಲಿ ಮುಗ್ಗರಿಸಿ ಟೂರ್ನಿಯಿಂದ ಹೊರಬಿದ್ದ ಭಾರತ ತಂಡ ಈ ಬಾರಿ ಪ್ರಶಸ್ತಿ ಗೆಲ್ಲೋ ವಿಶ್ವಾಸದಲ್ಲಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೇ.22 ರಂದು ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಲಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, 2011ರ ವಿಶ್ವಕಪ್ ತಂಡದ ಸದಸ್ಯ ವಿರೇಂದ್ರ ಸೆಹ್ವಾಗ್, ಕೊಹ್ಲಿ ಸೈನ್ಯಕ್ಕೆ ಮಹತ್ವದ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ ಕಾಲೆಳೆದ ಯುವರಾಜ್ ಸಿಂಗ್!
ಟೀಂ ಇಂಡಿಯಾ ಬಲಿಷ್ಠವಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಮತೋಲನ ಕಾಪಾಡಿಕೊಂಡಿದೆ. 4ನೇ ಕ್ರಮಾಂಕದ ಬ್ಯಾಟಿಂಗ್ ಆಯ್ಕೆ ಪರಿಸ್ಥಿತಿಗೆ ಅನುಗುಣವಾಗಿರಬೇಕು ಎಂದು ಸೆಹ್ವಾಗ್ ಸೂಚಿಸಿದ್ದಾರೆ. ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳು 4ನೇ ಕ್ರಮಾಂಕ ಸೇರಿದಂತೆ ಇತರ ಕ್ರಮಾಂಕದಲ್ಲೂ ಆಡಲೂ ಸಜ್ಜಾಗಬೇಕು ಎಂದು ಸೆಹ್ವಾಗ್ ಸೂಚಿಸಿದ್ದಾರೆ.
ಇದನ್ನೂ ಓದಿ: ತಂಡಕ್ಕಾಗಿ ಯಾವುದೇ ಕ್ರಮಾಂಕದಲ್ಲಿ ಆಡುವೆ ಎಂದ ರಾಹುಲ್
ಮೇ.30 ರಿಂದ ಇಂಗ್ಲೆಂಡ್ನಲ್ಲಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಜೂನ್ 5 ರಂದು ಭಾರತ ತನ್ನ ಮೊದಲ ಪಂದ್ಯ ಆಡಲಿದೆ. ರೌಂಡ್ ರಾಬಿನ್ ಮಾದರಿಯಲ್ಲಿರುವ ಈ ಬಾರಿಯ ಟೂರ್ನಿ ಎಲ್ಲಾ ತಂಡಗಳು ಮುಖಾಮುಖಿಯಾಗಲಿದೆ. ಹೀಗಾಗಿ ಬಲಿಷ್ಠ ತಂಡ ಮಾತ್ರ ಸೆಮಿಫೈನಲ್ ಪ್ರವೇಶಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.