
ನವದೆಹಲಿ(ಫೆ.14): ಅಂಧರ ಟಿ20 ವಿಶ್ವಕಪ್ ಗೆದ್ದ ತಂಡವನ್ನು ಅಭಿನಂದಿಸುವ ಭರದಲ್ಲಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಾಡಿರುವ ಎಡವಟ್ಟು ಅಂಧರ ತಂಡದ ಕ್ಯಾಪ್ಟನ್ ಅಜಯ್ ರೆಡ್ಡಿಗೆ ಇರಿಸುಮುರುಸು ಉಂಟು ಮಾಡಿದೆ.
ವಿಶ್ವಕಪ್ ಗೆದ್ದ ತಂಡವನ್ನು ಟ್ವೀಟರ್'ನಲ್ಲಿ ಅಭಿನಂದಿಸುವಾಗ ಸೆಹ್ವಾಗ್ #OtherMenInBlue ಎಂಬ ಹ್ಯಾಶ್ ಟ್ಯಾಗನ್ನು ಬಳಸಿದ್ದರು.
ಸೆಹ್ವಾಗ್ ಅಭಿನಂದನೆಗೆ ಧನ್ಯವಾದ ಅರ್ಪಿಸಿದ ಅಂಧರ ಕ್ರಿಕೆಟ್ ತಂಡದ ನಾಯಕ ಅಜಯ್ ರೆಡ್ಡಿ, ಹ್ಯಾಶ್ ಟ್ಯಾಗ್ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾವು ಕೂಡಾ ಅದೇ ನೀಲಿ ಬಣ್ಣದ ಜೆರ್ಸಿಯನ್ನು ಧರಿಸುತ್ತೇವೆ. ಅದೇ ತ್ರಿವರ್ಣವನ್ನು ಪ್ರತಿನಿಧಿಸುತ್ತೇವೆ. ಅದೇ ಗೌರವ ಹಾಗೂ ಹುಮ್ಮಸ್ಸಿನಿಂದ ಆಡುತ್ತೇವೆ. ಆದರೂ ನಮ್ಮನ್ನೇಕೆ Other ಎಂದು ಭಾವಿಸಲಾಗುತ್ತದೆ ಎಂದು ರೆಡ್ಡಿ ಪ್ರಶ್ನಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.