
ಚಂಡಿಘಡ(ಫೆ.07): ಲೋಕ ಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನ ಅಂತಿಮಗೊಳಿಸಲು ಕಸರತ್ತು ಆರಂಭಿಸಿದೆ. 2019ರಲ್ಲೂ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಭರ್ಜರಿ ಪ್ಲಾನ್ ಮಾಡಿದೆ. ಇದೀಗ ಹರಿಯಾಣ ಬಿಜೆಪಿ ಅಭ್ಯರ್ಥಿಗಳ ಸಂಭನೀಯ ಪಟ್ಟಿಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಹೆಸರನ್ನು ಸೇರಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಮುಂಬೈ ವಾಂಖೆಡೆಯಲ್ಲಿ ಐಪಿಎಲ್ ಪಂದ್ಯ ಡೌಟ್-ಬಿಸಿಸಿಐಗೆ ತಲೆನೋವು!
ಹರಿಯಾಣ ಬಿಜೆಪಿ ಮುಖಂಡನ ಪ್ರಕಾರ, ಪಾರ್ಲಿಮೆಂಟರಿ ಎಲೆಕ್ಷನ್ ಮೀಟಿಂಗ್ನಲ್ಲಿ ಮಾಜಿ ಕ್ರಿಕೆಟಿಗ ಸೆಹ್ವಾಗ್ ಹೆಸರನ್ನೂ ಸೇರಿಸಿಕೊಳ್ಳಲಾಗಿದೆ. ಸೆಹ್ವಾಗ್ ಒಪ್ಪಿದರೆ ಹರಿಯಾಣದ ರೋಹ್ಟಕ್ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುವುದು ಎಂದಿದ್ದಾರೆ. ಈ ಮೂಲಕ ಕಳೆದ ಮೂರು ಬಾರಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ನ ದೀಪೇಂದರ್ ಸಿಂಗ್ ಹೂಡಗೆ ಸೆಡ್ಡು ಹೊಡೆಯಲು ಬಿಜೆಪಿ ನಿರ್ಧರಿಸಿದೆ.
ಇದನ್ನೂ ಓದಿ: ಎರಡೇ ದಿನದಲ್ಲಿ ವಿರುಷ್ಕಾ ಫೋಟೋಗೆ 35 ಲಕ್ಷ ಲೈಕ್!
ಸೆಹ್ವಾಗ್ ಮನವೊಲಿಸಲು ಹರಿಯಾಣ ಹಿರಿಯ ಬಿಜೆಪಿ ಮುಖಂಡನ ಹೆಗಲಿಗೆ ಜವಾಬ್ದಾರಿ ನೀಡಲಾಗಿದೆ. ಪಕ್ಷ ಈಗಾಗಲೇ ಸೆಹ್ವಾಗ್ ಹೆಸರನ್ನ ಅಭ್ಯರ್ಥಿಗಳ ಪಟ್ಟಿಗೆ ಸೇರಿಸಿಕೊಂಡಿದೆ. ಇನ್ನೂ ಸೆಹ್ವಾಗ್ ನಿರ್ಧಾರವೇ ಪ್ರಮುಖ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಸೆಹ್ವಾಗ್ ಇನ್ನೂ ಕೂಡ ಬಿಜೆಪಿ ಪಾರ್ಟಿ ಸೇರಿಕೊಂಡಿಲ್ಲ ಎಂದು ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಶ್ ಬಾರಲಾ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.