ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕತ್ವ ವಹಿಸಿಕೊಂಡ ರೋಹಿತ್ ಶರ್ಮಾ ಇದೀಗ ಮಾಜಿ ಕ್ರಿಕೆಟಿಗರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅಷ್ಟಕ್ಕೂ ರೋಹಿತ್ ನಾಯಕತ್ವದ ಕುರಿತು ಮಾಜಿ ಕ್ರಿಕೆಟಿಗ ಹೇಳಿದ್ದೇನು? ಇಲ್ಲಿದೆ ವಿವರ.
ನವದೆಹಲಿ(ನ.13): ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕತ್ವದ ನಿಭಾಯಿಸಿದ ರೋಹಿತ್ ಶರ್ಮಾ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಎಂ.ಎಸ್ ಧೋನಿ ಅನುಪಸ್ಥಿತಿಯಲ್ಲಿ ರೋಹಿತ್ ಅತ್ಯುತ್ತಮವಾಗಿ ತಂಡವನ್ನ ನಿಭಾಯಿಸಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ಬಲಿಷ್ಠ ತಂಡ. ಆದರೆ ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಪ್ರದರ್ಶನ ನೀಡಿದೆ. ಬ್ಯಾಟಿಂಗ್ ಹಾಗೂ ನಾಯಕತ್ವ ನಿಭಾಯಿಸುವಲ್ಲಿ ರೋಹಿತ್ ಯಶಸ್ವಿಯಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವ ನನಗೆ ಹೆಚ್ಚಿನ ಖುಷಿ ನೀಡಿದೆ ಎಂದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಉತ್ತಮ ಪ್ರದರ್ಶನ ನೀಡಿದರು. ಹೀಗಾಗಿ ವೆಸ್ಟ್ ಇಂಡೀಸ್ ತಂಡ ಹಿನ್ನಡೆ ಅನುಭವಿಸಿತು. ಇನ್ನು ಕುಲ್ದೀಪ್ ಯಾದವ್ ಸೇರಿದಂತೆ ಟೀಂ ಇಂಡಿಯಾ ಬೌಲಿಂಗ್ ವಿಭಾಗವೂ ಶ್ರೇಷ್ಠ ಪ್ರದರ್ಶನ ನೀಡಿದೆ ಎಂದು ವಿವಿಎಸ್ ಹೇಳಿದ್ದಾರೆ.