
ಕೋಲ್ಕತಾ(ಡಿ.11): ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್'ನ (ಐಪಿಎಲ್) ತಂಡವಾದ ಕೋಲ್ಕತಾ ನೈಟ್ರೈಡರ್ಸ್ನ (ಕೆಕೆಆರ್) ತರಬೇತುದಾರರಾದ ವಾಸೀಂ ಅಕ್ರಂ, 2017ರ ಐಪಿಎಲ್'ನಲ್ಲಿ ಕೆಕೆಆರ್ ತಂಡಕ್ಕೆ ಸೇವೆ ಸಲ್ಲಿಸಲಾಗುವುದಿಲ್ಲವೆಂದು ತಂಡದ ಆಡಳಿತ ಮಂಡಳಿಯು ಅಧಿಕೃತವಾಗಿ ತಿಳಿಸಿದೆ.
ಅಕ್ರಂ ಅವರು ಇತರ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಸಮಯ ಹೊಂದಾಣಿಕೆ ಆಗದಿರುವುದರಿಂದ ಅವರು 2017ರ ಐಪಿಎಲ್ನಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಕೆಕೆಆರ್ನ ವ್ಯವಸ್ಥಾಪಕ ನಿರ್ದೇಶಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಿ ಮೈಸೂರು ತಿಳಿಸಿದ್ದು, ಅವರ ಇತರ ಕಾರ್ಯಗಳಿಗೆ ಯಶಸ್ಸು ಸಿಗಲೆಂದೂ ಹಾರೈಸಿದ್ದಾರೆ.
2010ರಿಂದ ಅಕ್ರಂ ಕೆಕೆಆರ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪಾಕ್ ಎಡಗೈ ವೇಗಿಯ ಗರಡಿಯಲ್ಲಿ ಪಳಗಿದ್ದ ಕೆಕೆಆರ್ ತಂಡ 2012 ಹಾಗೂ 2014ರಲ್ಲಿ ಐಪಿಎಲ್ ಚಾಂಪಿಯನ್ ಆಗಿ ಮೆರೆದಿತ್ತು.
10ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮುಂದಿನ ವರ್ಷ ಏಪ್ರಿಲ್ 5ರಿಂದ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.