
ಹೈದರಾಬಾದ್(ಏ.21): ಹೊಸಬರು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಸಾಮರ್ಥ್ಯ ಸಾಬೀತುಪಡಿಸಿರುವುದು ಆಯ್ಕೆ ಸಮಸ್ಯೆಯನ್ನು ಹೆಚ್ಚಿಸಿದ್ದು, ಇಂಥದ್ದೊಂದ ಸ್ಪರ್ಧಾತ್ಮಕ ಸಮಸ್ಯೆಗಳು ಎಂದಿಗೂ ಸ್ವಾಗತಾರ್ಹವೇ ಎಂದು ಸನ್'ರೈಸರ್ಸ್ ಹೈದರಾಬಾದ್ ತಂಡದ ಸಲಹೆಗಾರ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
‘‘ನಮ್ಮ ತಂಡಕ್ಕೆ ಯಾವುದೇ ವಿಭಾಗದಲ್ಲೂ ನ್ಯೂನತೆಗಳಿಲ್ಲ. ಎಲ್ಲಾ ಮೂರೂ ವಿಭಾಗಗಳಲ್ಲಿ ತಂಡ ಬಲಿಷ್ಠವಾಗಿದೆ. ಅವಕಾಶ ಸಿಕ್ಕಾಗಲೆಲ್ಲಾ ಆಟಗಾರರು ಅದನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಆದರೆ ಪ್ರತಿ ಪಂದ್ಯದಲ್ಲೂ ನಮ್ಮ ಆಟದ ಗುಣಮಟ್ಟಹೆಚ್ಚಿಸಿಕೊಳ್ಳಲು ಎದುರು ನೋಡುತ್ತಿದ್ದೇವೆ. ತಂಡ ಪ್ರತಿಭಾನ್ವಿತರ ಬೀಡಾಗಿರುವುದು ನಮ್ಮ ಅದೃಷ್ಟ'' ಎಂದೂ ಅವರು ಹೇಳಿದ್ದಾರೆ.
ಸದ್ಯ ಸನ್'ರೈಸರ್ಸ್ ಹೈದರಾಬಾದ್ ತಂಡ ಆರು ಪಂದ್ಯಗಳನ್ನಾಡಿದ್ದು ನಾಲ್ಕರಲ್ಲಿ ಜಯ ಸಾಧಿಸಿ, ಎರಡರಲ್ಲಿ ಸೋತು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.