
ಗುವಾಹಟಿ(ಅ.10): ಏಕದಿನ ಸರಣಿ ಸೋಲಿನಿಂದ ನಾವು ಕಳೆಗುಂದಿಲ್ಲ, ಎರಡನೇ ಪಂದ್ಯದಲ್ಲಿ ಬಲಿಷ್ಟ ಹೋರಾಟ ಮಾಡುವ ಮೂಲಕ ಟೀಂ ಇಂಡಿಯಾಗೆ ತಕ್ಕ ತಿರುಗೇಟು ನೀಡಲಿದ್ದೇವೆ ಎಂದು ಆಸ್ಟ್ರೇಲಿಯಾ ತಂಡದ ಹಂಗಾಮಿ ನಾಯಕ ಡೇವಿಡ್ ವಾರ್ನರ್ ಹೇಳಿದ್ದಾರೆ.
ಈಗಾಗಲೇ ಏಕದಿನ ಸರಣಿಯಲ್ಲಿ 1-4 ಅಂತರದಲ್ಲಿ ಸರಣಿ ಕೈಚೆಲ್ಲಿ, ಟಿ20 ಸರಣಿಯಲ್ಲೂ 0-1 ಅಂತರದ ಹಿನ್ನಡೆ ಅನುಭವಿಸಿರುವ ಆಸ್ಟ್ರೇಲಿಯಾ ತಂಡದ ನಿರಾಶದಾಯಕ ಪ್ರದರ್ಶನದ ಬಗ್ಗೆ ಪ್ರತಿಕ್ರಿಯಿಸಿದ ವಾರ್ನರ್, ಆಸ್ಟ್ರೇಲಿಯಾ ತಂಡಕ್ಕೆ ತನ್ನದೇ ಆದ ಛಾಪು ಇದೆ. ಹಾಗಾಗಿ ಎರಡನೇ ಪಂದ್ಯದಲ್ಲಿ ಕಮ್'ಬ್ಯಾಕ್ ಮಾಡಲಿದ್ದೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಮೊದಲ ಟಿ20 ಸೋಲಿನ ಬಗ್ಗೆ ನಾವು ಅಷ್ಟೇನು ತಲೆ ಕೆಡಿಸಿಕೊಂಡಿಲ್ಲ. ನಾವೆಲ್ಲ 100 ಪ್ರತಿಶತ ಆಟವಾಡಲು ಪ್ರಯತ್ನಿಸುತ್ತೇವೆ. ನಾವು ಆ್ಯಷಸ್ ಸರಣಿಯ ಬಗ್ಗೆ ಯೋಚಿಸಿಲ್ಲ, ನಮ್ಮ ಗುರಿಯೇನಿದ್ದರೂ ಎರಡನೇ ಟಿ20 ಪಂದ್ಯವನ್ನು ಗೆಲ್ಲುವುದಾಗಿದೆ ಎಂದು ವಾರ್ನರ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.