ಬೆಳ್ಳಿ ಗೆದ್ದ ಗುರುರಾಜ್'ಗೆ ರಾಜ್ಯ ಸರ್ಕಾರದಿಂದ ಬಂಪರ್ ಬಹುಮಾನ

Published : Apr 07, 2018, 03:58 PM ISTUpdated : Apr 14, 2018, 01:13 PM IST
ಬೆಳ್ಳಿ ಗೆದ್ದ ಗುರುರಾಜ್'ಗೆ ರಾಜ್ಯ ಸರ್ಕಾರದಿಂದ ಬಂಪರ್ ಬಹುಮಾನ

ಸಾರಾಂಶ

ಆಸ್ಟ್ರೇಲಿಯಾದ ಗೋಲ್ಡ್​​ಕೋಸ್ಟ್​ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್’ನಲ್ಲಿ 56 ಕೆಜಿ ಪುರುಷರ ವಿಭಾಗದ ವೇಯ್ಟ್​​​ಲಿಫ್ಟಿಂಗ್​​​ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆಲ್ಲುವ ಮೂಲಕ ಪದಕದ ಖಾತೆ ತೆರೆದಿದ್ದರು.

ಉಡುಪಿ(ಏ.07): ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ ಅವರಿಗೆ ಸರ್ಕಾರದಿಂದ ₹25 ಲಕ್ಷ ಬಹುಮಾನ ಮತ್ತು ಸರ್ಕಾರಿ ಉದ್ಯೋಗ ದೊರಕಲಿದೆ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ರಾಜ್ಯದಲ್ಲಿ ಕ್ರೀಡಾನೀತಿಈಗಾಗಲೇ ಘೋಷಣೆ ಮಾಡಲಾಗಿದ್ದು, ಅದರನ್ವಯ ಸರ್ಕಾರದ ನೇಮಕಾತಿಯಲ್ಲೂ ಸಾಧಕ ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗಿದೆ. ಸಾಧಕ ಕ್ರೀಡಾಪಟುಗಳಿಗೆ ಬಹುಮಾನ ನೀಡುವುದಕ್ಕಾಗಿಯೇ ₹48 ಕೋಟಿ ಮೀಸಲಿಡಲಾಗಿದೆ. ಕ್ರೀಡಾನೀತಿಯಂತೆ ಗುರುರಾಜ್ ಅವರಿಗೆ ಬಹುಮಾನ ಮತ್ತು ಸರ್ಕಾರಿ ಉದ್ಯೋಗ ದೊರೆಯಲಿದೆ ಎಂದು ಸುದ್ದಿಗಾರರಿಗೆ ಸಚಿವರು ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ಗೋಲ್ಡ್​​ಕೋಸ್ಟ್​ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್’ನಲ್ಲಿ 56 ಕೆಜಿ ಪುರುಷರ ವಿಭಾಗದ ವೇಯ್ಟ್​​​ಲಿಫ್ಟಿಂಗ್​​​ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆಲ್ಲುವ ಮೂಲಕ ಪದಕದ ಖಾತೆ ತೆರೆದಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ind vs pak ಪಂದ್ಯದಲ್ಲಿ ಭಾವನಾತ್ಮಕ ಕ್ಷಣ: ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ VIDEO
Ind Vs Pak: ನಿಮ್ಮ ವಯಸ್ಸೆಷ್ಟು? ಎಂದು ಕೇಳಿದ ಪಾಕಿಸ್ತಾನಿ ಫ್ಯಾನ್‌! ಭಾರತೀಯ ಅಜ್ಜಿ ಕೊಟ್ಟ ಖಡಕ್ ಉತ್ತರಕ್ಕೆ ಬಾಯಿ ಮುಚ್ಚಿಕೊಂಡ!