
ಇತ್ತೀಚಿನ ದಿನಗಳಲ್ಲಿ ಭಾರತದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಎಂಬ ಹೆಸರು ಭಾರೀ ಸದ್ದು ಮಾಡುತ್ತಿದೆ. ನೀಟ್ (NEET) ಪೇಪರ್ ಸೋರಿಕೆ ಹಗರಣದ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಧ್ವನಿ ಎತ್ತುತ್ತಿರುವ ಈ ಪಾರ್ಟಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಅದರಲ್ಲೂ ಇವರು ಪ್ರತಿಭಟನೆಯ ನಡುವೆ ಕ್ರಿಕೆಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಜನರ ಕುತೂಹಲ ಕೆರಳಿಸಿದೆ.
ಸಾಮಾನ್ಯವಾಗಿ ಪ್ರತಿಭಟನೆ ಎಂದರೆ ಘೋಷಣೆ, ಆಕ್ರೋಶ ಇರುತ್ತದೆ. ಆದರೆ ಅಭಿಜಿತ್ ದೀಪ್ಕೆ ಅವರ ನೇತೃತ್ವದ 'Gen-Z' ಪ್ರತಿಭಟನೆ ಸ್ವಲ್ಪ ಭಿನ್ನವಾಗಿದೆ. ಜಂತರ್ ಮಂತರ್ನಲ್ಲಿ ಪ್ರತಿಭಟನಾಕಾರರೊಂದಿಗೆ ಅಭಿಜಿತ್ ಕ್ರಿಕೆಟ್ ಆಡುತ್ತಿರುವ ವಿಡಿಯೋವನ್ನು ಸಿಜೆಪಿ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ಕಾಕ್ರೋಚ್ಗಳೇ ಎದ್ದೇಳಿ! ಜಂತರ್ ಮಂತರ್ಗೆ ಬನ್ನಿ. ಇದು Gen-Z ಪ್ರತಿಭಟನೆ, ಇಲ್ಲಿ ಸ್ವಲ್ಪ ಕ್ರಿಕೆಟ್ ಇರುತ್ತೆ, ಸ್ವಲ್ಪ ಆಂದೋಲನವೂ ಇರುತ್ತೆ ಎಂದು ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದರು. ಕ್ರಿಕೆಟ್ ಮಾತ್ರವಲ್ಲದೆ, ಇವರಿಗೆ ವಾಲಿಬಾಲ್ ಆಡುವುದು ಎಂದರೆ ಕೂಡ ಬಹಳ ಇಷ್ಟವಂತೆ.
ಅಭಿಜಿತ್ ಕೇವಲ ಆಂದೋಲನಕಾರಿ ಮಾತ್ರವಲ್ಲ, ಉತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿದ್ದಾರೆ. ಇವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ (ಔರಂಗಾಬಾದ್) ಮೂಲದವರು. ಪ್ರಾಥಮಿಕ ಶಿಕ್ಷಣದ ನಂತರ ಪುಣೆಯಲ್ಲಿ ಪತ್ರಿಕೋದ್ಯಮದಲ್ಲಿ (Journalism) ಪದವಿ ಪಡೆದರು. ನಂತರ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಾಕ್ಕೆ ತೆರಳಿದ ಇವರು, ಪ್ರತಿಷ್ಠಿತ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ (Boston University) 'ಪಬ್ಲಿಕ್ ರಿಲೇಶನ್ಸ್' ವಿಷಯದಲ್ಲಿ ಸ್ನಾತಕೋತ್ತರ ಪದವಿ (Masters) ಮುಗಿಸಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ನೀಡಿದ್ದ ಒಂದು ಹೇಳಿಕೆಯಲ್ಲಿ 'ಕಾಕ್ರೋಚ್' ಎಂಬ ಪದ ಬಳಕೆಯಾಗಿತ್ತು. ಇದನ್ನು ಸ್ಫೂರ್ತಿಯಾಗಿ ಪಡೆದ ಅಭಿಜಿತ್, ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಎಂಬ ವಿಶಿಷ್ಟ ಹೆಸರಿನ ಸಂಘಟನೆ ಆರಂಭಿಸಿದರು. ಆರಂಭದಲ್ಲಿ ಆನ್ಲೈನ್ನಲ್ಲಿ ಸಣ್ಣ ಮಟ್ಟದಲ್ಲಿ ಶುರುವಾದ ಈ ಪಾರ್ಟಿಗೆ ಇಂದಿನ ಯುವ ಪೀಳಿಗೆಯಿಂದ (Gen-Z) ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಸದ್ಯ ನೀಟ್ ಪೇಪರ್ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಅಭಿಜಿತ್ ದೆಹಲಿಯಲ್ಲಿ ಬೀದಿಗಿಳಿದಿದ್ದಾರೆ. ಓದಿಕೊಂಡ ಯುವಕನೊಬ್ಬ ವಿಭಿನ್ನ ಹಾದಿಯಲ್ಲಿ ಜನರನ್ನು ಸಂಘಟಿಸಿ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
Cockroaches सुबह हो गई है! आ जाओ जंतर मंतर
Gen Z प्रोटेस्ट है ये, थोड़ा क्रिकेट होगा थोड़ा आंदोलन pic.twitter.com/Q5ww9lKUOs— Cockroach is Back (@Cockroachisback) June 21, 2026
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.