ಹಿತಾಸಕ್ತಿ ಸಂಘರ್ಷದಲ್ಲಿ ವಿರಾಟ್ ಕೊಹ್ಲಿ ಆಪ್ತ..?

Published : Sep 16, 2017, 04:11 PM ISTUpdated : Apr 11, 2018, 12:56 PM IST
ಹಿತಾಸಕ್ತಿ ಸಂಘರ್ಷದಲ್ಲಿ ವಿರಾಟ್ ಕೊಹ್ಲಿ ಆಪ್ತ..?

ಸಾರಾಂಶ

ಟ್ರೈನರ್‌'ಗಳ ಪರೀಕ್ಷೆಗೆ ಬಸು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದರು. ಆ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಪಡೆದ ಸೋಹಮ್‌'ಗೆ ಎನ್‌'ಸಿಎ ಟ್ರೈನರ್ ಹುದ್ದೆ ನೀಡಲಾಗಿದ್ದು, ಹೀಗಾಗಿ ಬಸು ಸ್ವಹಿತಾಸಕ್ತಿ ಸುಳಿಯಲ್ಲಿ ಸಿಲುಕಿದ್ದಾರೆ.

ಬೆಂಗಳೂರು(ಸೆ.16): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಗೆ ಸೋಹಮ್ ದೇಸಾಯಿ ಅವರನ್ನು ಟ್ರೈನರ್ ಆಗಿ ನೇಮಕ ಮಾಡಿರುವುದರ ಹಿಂದೆ ಭಾರತ ಕ್ರಿಕೆಟ್ ತಂಡದ ಟ್ರೈನರ್ ಹಾಗೂ ವಿರಾಟ್ ಕೊಹ್ಲಿ ಆಪ್ತ ಶಂಕರ್ ಬಸು ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ.

ಎನ್'ಸಿಎ ಉಪ ಸಮಿತಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. ಸೋಹಮ್, ಬಸು ನಡೆಸುವ ಜಿಮ್‌'ನಲ್ಲಿ ಕೆಲಸ ಮಾಡುತ್ತಿದ್ದರು. ಹಾಗೆಯೇ ಗುಜರಾತ್ ರಣಜಿ ತಂಡದಲ್ಲಿಯೂ ಟ್ರೈನರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ನಡೆದ ಎನ್'ಸಿಎ ಟ್ರೈನರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎನ್'ಸಿಎದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ

ಆದರೆ ಟ್ರೈನರ್‌'ಗಳ ಪರೀಕ್ಷೆಗೆ ಬಸು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದರು. ಆ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಪಡೆದ ಸೋಹಮ್‌'ಗೆ ಎನ್‌'ಸಿಎ ಟ್ರೈನರ್ ಹುದ್ದೆ ನೀಡಲಾಗಿದ್ದು, ಹೀಗಾಗಿ ಬಸು ಸ್ವಹಿತಾಸಕ್ತಿ ಸುಳಿಯಲ್ಲಿ ಸಿಲುಕಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಆ ನಿರ್ಧಾರ ನೋಡಿ ಶಾಕ್ ಆಯ್ತು'; ಸಿಎಸ್‌ಕೆ ಸೋಲಿನ ಬೆನ್ನಲ್ಲೇ ಮ್ಯಾನೇಜ್ಮೆಂಟ್ ಮೇಲೆ ಕಿಡಿಕಾರಿದ ಅಶ್ವಿನ್‌!
ನಿಂಬೆ ಹಣ್ಣಿಗೆ ಉದುರಿದ ವಿಕೆಟ್! ಚೆನ್ನೈ ಎದುರು ವಾಮಾಚಾರ ಮಾಡಿ ಪಂದ್ಯ ಗೆದ್ದಿತಾ ಸನ್‌ರೈಸರ್ಸ್ ಹೈದರಾಬಾದ್? ವಿಡಿಯೋ ವೈರಲ್