'ಗಂಭೀರ್‌ಗೆ ಚಿಕಿತ್ಸೆ ಅಗತ್ಯವಿದೆ, ನಾನೇ ವೀಸಾ ಕೊಡಿಸುವೆ'

Published : May 06, 2019, 02:23 PM IST
'ಗಂಭೀರ್‌ಗೆ ಚಿಕಿತ್ಸೆ ಅಗತ್ಯವಿದೆ, ನಾನೇ ವೀಸಾ ಕೊಡಿಸುವೆ'

ಸಾರಾಂಶ

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹಾಗೂ ಗೌತಮ್ ಗಂಭೀರ್ ನಡುವಿನ ವಾಕ್ಸಮರ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಗಂಭೀರ್ ಟ್ವೀಟ್’ಗೆ ಅಫ್ರಿದಿ ತಿರುಗೇಟು ನೀಡಿದ್ದಾರೆ. ಅಷ್ಟಕ್ಕೂ ಏನೇನಾಯ್ತು ನೀವೇ ನೋಡಿ...

ಇಸ್ಲಾಮಾಬಾದ್[ಮೇ.6]: ಶಾಹಿದ್ ಅಫ್ರಿದಿ ಮತ್ತು ಗೌತಮ್ ಗಂಭೀರ್ ನಡುವಿನ ವಾಕ್ ಸಮರ ಮುಂದುವರಿದಿದ್ದು, ಗಂಭೀರ್ ಟ್ವೀಟ್’ಗೆ ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ತಿರುಗೇಟು ನೀಡಿದ್ದಾರೆ.

ಮಾನಸಿಕ ಚಿಕಿತ್ಸೆ ಕೊಡಿಸುತ್ತೇನೆ, ಭಾರತಕ್ಕೆ ಬನ್ನಿ: ಅಫ್ರಿದಿಗೆ ಗಂಭೀರ್ ಆಹ್ವಾನ

ಇದೀಗ ಗಂಭೀರ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಅಫ್ರಿದಿ, ‘ಗಂಭೀರ್‌ಗೆ ಏನೋ ಸಮಸ್ಯೆ ಇದೆ ಅನಿಸುತ್ತದೆ. ಅವರು ಚಿಕಿತ್ಸೆ ಪಡೆದುಕೊಳ್ಳುವುದು ಒಳಿತು. ಬೇಕಾದರೆ ನಾನೇ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತೇನೆ. ಪಾಕಿಸ್ತಾನದಲ್ಲಿಯೇ ಒಳ್ಳೆಯ ಚಿಕಿತ್ಸೆ ಕೊಡಿಸುತ್ತೇನೆ. ಅವರಿಗೆ ನಾನೇ ಪಾಕ್ ವೀಸಾವನ್ನೂ ಕೊಡಿಸುತ್ತೇನೆ’ ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ಮತ್ತೆ ತುಪ್ಪ ಸುರಿದಿದ್ದಾರೆ.

ಟೀಂ ಇಂಡಿಯಾ ವಿಶ್ವಕಪ್ ಹೀರೋ ಕಾಲೆಳೆದ ಅಫ್ರಿದಿ

ಶಾಹಿದ್ ಅಫ್ರಿದಿ ತಮ್ಮ ಆತ್ಮಕತೆ ’ಗೇಮ್ ಚೇಂಜರ್’ನಲ್ಲಿ ಟೀಂ ಇಂಡಿಯಾ ವಿಶ್ವಕಪ್ ಹೀರೋ ಗೌತಮ್ ಗಂಭೀರ್’ಗೆ ಹೇಳಿಕೊಳ್ಳುವಂತಹ ಯಾವುದೇ ಶ್ರೇಷ್ಠ ದಾಖಲೆಗಳನ್ನು ಬರೆಯದಿದ್ದರೂ, ಅಹಂಕಾರಕ್ಕೇನೂ ಕಡಿಮೆಯಿಲ್ಲ ಎಂದು ಹೇಳುವ ಮೂಲಕ ಗೌತಿ ಕಾಲೆಳೆದಿದ್ದರು. ಇದು ವಾಕ್ಸಮರಕ್ಕೆ ಕಾರಣವಾಗಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಡು ಇಲ್ಲವೇ ಮಡಿ ಮ್ಯಾಚ್‌ನಲ್ಲಿ ಭಾರತವನ್ನು ಏಕಾಂಗಿಯಾಗಿ ಗೆಲ್ಲಿಸಿದ ಸಂಜು ಸ್ಯಾಮ್ಸನ್! ಉಲ್ಟಾ ಹೊಡೆದ ಕೋಚ್ ಗೌತಮ್ ಗಂಭೀರ್
ಈತ ಔಟಾಗದೇ ಇದ್ದಿದ್ದರೇ ಭಾರತ ಸೆಮೀಸ್‌ಗೆ ಎಂಟ್ರಿ ಕೊಡ್ತಿರಲಿಲ್ಲ! ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಸೋಲುತ್ತೆ ಎಂದ ಪಾಕ್ ಕ್ರಿಕೆಟಿಗ