
ಮುಂಬೈ(ಸೆ.16): ರಣಜಿ ಹಾಗೂ ದೇಸಿ ಟೂರ್ನಿಗಳಲ್ಲಿ ಶತಕದ ಮೇಲೆ ಶತಕ ಸಿಡಿಸಿ ಅಬ್ಬರಿಸುತ್ತಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ಶೀಘ್ರದಲ್ಲೇ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ.
ಮಯಾಂಕ್ ಅಗರ್ವಾಲ್ ಆಯ್ಕೆ ಕುರಿತು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಸೂಚನೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿ ಹಾಗೂ ಏಷ್ಯಾಕಪ್ ಟೂರ್ನಿಗೆ ಮಯಾಂಕ್ ಆಗರ್ವಾಲ್ ಆಯ್ಕೆ ಮಾಡದ ಆಯ್ಕೆ ಸಮಿತಿ ವಿರುದ್ದ ಟೀಕೆಗಳು ಕೇಳಿ ಬಂದಿತ್ತು.
ಆಸ್ಟ್ರೇಲಿಯಾ ಎ ಹಾಗೂ ಸೌತ್ಆಫ್ರಿಕಾ ಎ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿರುವ ಮಯಾಂಕ್ ಅಗರ್ವಾಲ್ ಮುಂಬರುವ ವೆಸ್ಟ್ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆಯಾಗೋ ಸಾಧ್ಯತೆ ಇದೆ. ಈ ಕುರಿತು ಎಂ.ಎಸ್.ಕೆ ಪ್ರಸಾದ್ ಸೂಚನೆ ನೀಡಿದ್ದಾರೆ.
ಏಷ್ಯಾಕಪ್ ಸರಣಿ ಬಳಿಕ ಟೀಂ ಇಂಡಿಯಾ ಅಕ್ಟೋಬರ್ 4 ರಿಂದ ವೆಸ್ಟಇಂಡೀಸ್ ವಿರುದ್ದ 2 ಟೆಸ್ಟ್, 5 ಏಕದಿನ ಹಾಗೂ 3 ಟಿ20 ಪಂದ್ಯದ ಸರಣಿ ಆಡಲಿದೆ. ಈ ಟೂರ್ನಿಗೆ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.