
ದುಬೈ(ಸೆ.17): ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತನ್ನ ಹೋರಾಟವನ್ನ ನಾಳೆಯಿಂದ(ಸೆ.18) ಆರಂಭಿಸಲಿದೆ. ಹಾಂಕ್ ಕಾಂಗ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಕ್ರಮಾಂಕ ಪರೀಕ್ಷಿಸಲಿದೆ.
ಟೀಂ ಇಂಡಿಯಾ ಮಧ್ಯಮ ಕ್ರಮಾಂಕದಲ್ಲಿ ಹಲವು ಆಯ್ಕೆಗಳಿದೆ. ಆದರೆ ಯಾರೂ ಕೂಡ ಖಾಯಂ ಆಗಿಲ್ಲ. ಅದರಲ್ಲೂ 4ನೇ ಕ್ರಮಾಂಕದಲ್ಲಿ ಯಾರು ಕಣಕ್ಕಿಳಿಯುತ್ತಾರೆ ಅನ್ನೋದು ಸದ್ಯದ ಕುತೂಹಲ. ಎಂ. ಎಸ್ ಧೋನಿ ಅಥವಾ ಕನ್ನಡಿಗ ಮನೀಶ್ ಪಾಂಡೆ ಇಬ್ಬರಲ್ಲಿ ಯಾರಿಗೆ 4ನೇ ಕ್ರಮಾಂಕ ಅನ್ನೋ ಚರ್ಚೆ ಶುರುವಾಗಿದೆ.
ಟೀಂ ಇಂಡಿಯಾ ಗೊಂದಲಕ್ಕೆ ಮಾಜಿ ವೇಗಿ ಜಹೀರ್ ಖಾನ ಸಲಹೆ ನೀಡಿದ್ದಾರೆ. 4ನೇ ಕ್ರಮಾಂಕದಲ್ಲಿ ಭಾರತ, ಕೆಎಲ್ ರಾಹುಸ್ ಸುರೇಶ್ ರೈನಾ, ಮನೀಶ್ ಪಾಂಡೆ ಹಾಗೂ ಶ್ರೇಯಸ್ ಅಯ್ಯರ್ ಸೇರಿದಂತೆ ಹಲವರನ್ನ ಪರೀಕ್ಷಿಸಿಸಿದೆ. ಆದರೆ ಎಂ ಎಸ್ ಧೋನಿಯೇ ನಾಲ್ಕನೇ ಕ್ರಮಾಂಕಕ್ಕೆ ಸೂಕ್ತ ಎಂದು ಜಹೀರ್ ಹೇಳಿದ್ದಾರೆ.
ತಂಡದ ಜವಾಬ್ದಾರಿ ಅರಿತು ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಧೋನಿಗಿದೆ. ಸಂಕಷ್ಟದ ಸಂದರ್ಭದಲ್ಲೂ ಧೋನಿ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. ಜೊತೆಗೆ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿ ಕೂಡ ಕಾಡಲಿದೆ. ಹೀಗಾಗಿ ಧೋನಿ 4ನೇ ಕ್ರಮಾಂಕಕ್ಕೆ ಸೂಕ್ತ ಎಂದು ಜಹೀರ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.