ಕೆಕೆಆರ್ ನಾಯಕ ಪಟ್ಟಕ್ಕೆ ಕನ್ನಡಿಗ..? ಈ ಬಗ್ಗೆ ಉತ್ತಪ್ಪ ಹೇಳೋದೇನು...?

Published : Feb 07, 2018, 03:33 PM ISTUpdated : Apr 11, 2018, 12:39 PM IST
ಕೆಕೆಆರ್ ನಾಯಕ ಪಟ್ಟಕ್ಕೆ ಕನ್ನಡಿಗ..? ಈ ಬಗ್ಗೆ ಉತ್ತಪ್ಪ ಹೇಳೋದೇನು...?

ಸಾರಾಂಶ

ಈ ಮೊದಲು ಐಪಿಎಲ್'ನಲ್ಲಿ ಉತ್ತಪ್ಪ, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪುಣೆ ವಾರಿಯರ್ಸ್ ತಂಡವನ್ನು ಪ್ರತಿನಿಧಿಸಿದ್ದರು. 2014ರಿಂದ ಕೆಕೆಆರ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ.

ಮುಂಬೈ(ಫೆ.07): ಕೊಲ್ಕತಾ ನೈಟ್'ರೈಡರ್ಸ್(ಕೆಕೆಆರ್) ತಂಡ ಈ ಬಾರಿ ಸ್ಟಾರ್ ನಾಯಕ ಗೌತಮ್ ಗಂಭೀರ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ಎರಡು ಬಾರಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಗಂಭೀರ್ ಈ ಬಾರಿ ಡೆಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇದೇವೇಳೆ ಕನ್ನಡಿಗ ರಾಬಿನ್ ಉತ್ತಪ್ಪ ಕೆಕೆಆರ್ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

2018ನೇ ಸಾಲಿನ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಕೆಕೆಆರ್ ಪ್ರಾಂಚೈಸಿಯು RTM ಕಾರ್ಡ್ ಬಳಸಿ 6.4 ಕೋಟಿ ನೀಡಿ ಉತ್ತಪ್ಪರನ್ನು ಉಳಿಸಿಕೊಂಡಿದೆ. ನಾಯಕತ್ವ ಅವಕಾಶದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತಪ್ಪ, ಅಂತಹ ಅವಕಾಶ ಒದಗಿ ಬಂದರೆ ಖಂಡಿತ ಸ್ವೀಕರಿಸುತ್ತೇನೆ. ತಂಡ ನನ್ನಿಂದ ಏನನ್ನೂ ಬಯಸುತ್ತೋ ಅದನ್ನು ಶೇ.110ರಷ್ಟು ನೀಡಲು ಪ್ರಯತ್ನಿಸುತ್ತೇನೆಂದು ಉತ್ತಪ್ಪ ಹೇಳಿದ್ದಾರೆ.

ಈ ಮೊದಲು ಐಪಿಎಲ್'ನಲ್ಲಿ ಉತ್ತಪ್ಪ, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪುಣೆ ವಾರಿಯರ್ಸ್ ತಂಡವನ್ನು ಪ್ರತಿನಿಧಿಸಿದ್ದರು. 2014ರಿಂದ ಕೆಕೆಆರ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?