
ನವದೆಹಲಿ[ಡಿ.22]: ಮುಂದಿನ ತಿಂಗಳು ಭಾರತ ಮಹಿಳಾ ಕ್ರಿಕೆಟ್ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಏಕದಿನ ಹಾಗೂ ಟಿ20 ಸರಣಿಗೆ ತಂಡಗಳನ್ನು ಶುಕ್ರವಾರ ಆಯ್ಕೆ ಮಾಡಲಾಯಿತು.
ವಿಶ್ವಕಪ್ ಸೆಮಿಫೈನಲ್ನಲ್ಲಿ ಆಡುವ ಅವಕಾಶ ಪಡೆಯದ ಮಿಥಾಲಿ ರಾಜ್, ಟಿ20 ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಏಕದಿನ ತಂಡವನ್ನು ಮಿಥಾಲಿಯೇ ಮುನ್ನಡೆಸಲಿದ್ದಾರೆ. ಲಯದ ಸಮಸ್ಯೆ ಎದುರಿಸುತ್ತಿರುವ ಕರ್ನಾಟಕದ ವೇದಾ ಕೃಷ್ಣಮೂರ್ತಿಯನ್ನು ತಂಡದಿಂದ ಹೊರಹಾಕಲಾಗಿದೆ.
ಟಿ20 ತಂಡದಲ್ಲಿ ಅವರ ಬದಲಿಗೆ ದೆಹಲಿಯ ಪ್ರಿಯಾ ಪೂನಿಯಾಗೆ ಸ್ಥಾನ ನೀಡಲಾಗಿದೆ. ಏಕದಿನ ತಂಡದಲ್ಲಿ ರಾಜ್ಯದ ರಾಜೇಶ್ವರಿ ಗಾಯಕ್ವಾಡ್ ಸ್ಥಾನ ಪಡೆದರೆ, ಟಿ20 ತಂಡದಲ್ಲಿ ರಾಜ್ಯದ ಆಟಗಾರ್ತಿಯರಿಲ್ಲ. ಭಾರತ ತಂಡ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಅಚ್ಚರಿ ಆಯ್ಕೆ
ಭಾರತ ತಂಡವು ನೂತನ ಕೋಚ್ WV ರಾಮನ್ ಮಾರ್ಗದರ್ಶನದಲ್ಲಿ ಜನವರಿ 24ರಂದು ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿದೆ. ಟಿ20 ತಂಡವನ್ನು ಹರ್ಮನ್’ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.