
ಮುಂಬೈ(ನ.27): ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿ ಹೋರಾಟ ಅಂತ್ಯಗೊಳಿಸಿತ್ತು. ಈ ಪಂದ್ಯದಲ್ಲಿ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಕೈಬಿಟ್ಟಿರೋದು ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಮಿಥಾಲಿ ಹಾಗೂ ನಾಯಕಿ ಹರ್ಮನ್ಪ್ರೀತ್ ಕೌರ್ಗೆ ಬಿಸಿಸಿಐ ಮುಂದೆ ಹಾಜರಾಗುವಂತೆ ಸೂಚಿಸಿತ್ತು.
ವಿವಾದ ಬಳಿಕ ಮಿಥಾಲಿ ರಾಜ್ ಇದೀಗ ಬಿಸಿಸಿಐಗೆ ಸುದೀರ್ಘ ಪತ್ರ ಬರೆದಿದ್ದಾರೆ. ಕೋಚ್ ರಮೇಶ್ ಪವಾರ್ ಹಾಗೂ ಬಿಸಿಸಿಐ ಆಡಳಿತ ಸಮಿತಿ ಸದಸ್ಯೆ ಡಯಾನಾ ಇಡುಜಿ ಅಧಿಕಾರ ಬಳಸಿ ನನ್ನನ್ನ ತಂಡದಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ನಾಯಕಿ ಹರ್ಮನ್ಪ್ರೀತ್ ಪಾತ್ರ ಏನೂ ಇಲ್ಲ ಎಂದು ಕ್ಲೀನ್ ಚಿಟ್ ನೀಡಿದ್ದಾರೆ.
ಬಿಸಿಸಿಐ ಆಡಳಿತ ಸಮಿತಿ ಹಾಗೂ ಬಿಸಿಸಿಐ ಸಿಇಒ ರಾಹುಲ್ ಜೊಹ್ರಿಗೆ ಮಿಥಾಲಿ ಪತ್ರ ಬರೆದಿದ್ದಾರೆ. ಇದೀಗ ಚೆಂಡು ಬಿಸಿಸಿಐ ಅಂಗಳದಲ್ಲಿ. ಶೀಘ್ರದಲ್ಲೇ ಬಿಸಿಸಿಐ ಈ ಕುರಿತು ನಿರ್ಧಾರ ಪ್ರಕಟಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.