
ನವದೆಹಲಿ(ಆ.28): ಭಾರತದ ಮೊದಲ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ತವರಿನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಸ್ವಿಜರ್ಲೆಂಡ್ನಿಂದ ಸೋಮವಾರ ತಡರಾತ್ರಿ ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಂಧು ಅವರನ್ನು ನೂರಾರು ಅಭಿಮಾನಿಗಳು ಭರ ಮಾಡಿಕೊಂಡರು. ಅವರ ಜತೆ ಕೋಚ್ ಪುಲ್ಲೇಲಾ ಗೋಪಿಚಂದ್ ಸಹ ಇದ್ದರು.
ಇದನ್ನೂ ಓದಿ: ಸಿಂಧುಗೆ ಚಾಂಪಿಯನ್ ಕಿರೀಟ ತೊಡಿಸಿದ ಬಂಗಾರದ ಮನುಷ್ಯ!
ಸತತ ಪಂದ್ಯಗಳು, ಪ್ರಯಾಣದಿಂದ ದಣಿದಿದ್ದರೂ ಸಿಂಧು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಜತೆ ಸಂಭ್ರಮದಲ್ಲಿ ಭಾಗಿಯಾದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಧು, ‘ನನಗೆ ಬಹಳ ಸಂತೋಷವಾಗಿದೆ. ನನ್ನ ದೇಶದ ಬಗ್ಗೆ ನನಗೆ ಬಹಳ ಹೆಮ್ಮೆ ಇದೆ. ಈ ಗೆಲುವಿಗಾಗಿ ಬಹಳ ದಿನಗಳಿಂದ ಕಾಯುತ್ತಿದೆ. ಸ್ವಿಜರ್ಲೆಂಡ್ನಲ್ಲಿ ಸಂಭ್ರಮಿಸಲು ಹೆಚ್ಚು ಸಮಯ ಸಿಗಲಿಲ್ಲ. ಈಗ ಎಲ್ಲರೊಂದಿಗೆ ಸಂಭ್ರಮಿಸುತ್ತೇನೆ. ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಲು ಮತ್ತಷ್ಟುಶ್ರಮಿಸುತ್ತೇನೆ’ ಎಂದರು.
ಇದನ್ನೂ ಓದಿ: ನನ್ನನ್ನು ಪ್ರಶ್ನಿಸಿದವರಿಗೆ ಉತ್ತರ ನೀಡಿದ್ದೇನೆ: ಸಿಂಧು!
ಮಂಗಳವಾರ ಸಿಂಧು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರನ್ನು ಭೇಟಿ ಮಾಡಿದರು. ಸಿಂಧು ಕೊರಳಿಗೆ ವಿಶ್ವ ಚಾಂಪಿಯನ್ಶಿಪ್ ಪದಕ ಹಾಕಿ, ಮೋದಿ ಅಭಿನಂದಿಸಿದರು. ರಿಜಿಜು ಜತೆ 1 ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ ಸಿಂಧು, ತಮ್ಮ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ಸಿಂಧು ಜತೆ ಕೋಚ್ಗಳಾದ ಗೋಪಿಚಂದ್, ಕಿಮ್ ಜಿ ಹ್ಯುನ್, ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಮುಖ್ಯಸ್ಥ ಹಿಮಂತ ಬಿಸ್ವಾ ಶರ್ಮಾ ಹಾಗೂ ಅವರ ತಂದೆ ಪಿ.ವಿ.ರಮಣ ಇದ್ದರು.
ಕ್ರೀಡಾ ಸಚಿವರು ಸಿಂಧುಗೆ .10 ಲಕ್ಷ ಬಹುಮಾನ ನೀಡಿ ಅಭಿನಂದಿಸಿದರು. ಮಂಗಳವಾರ ಸಂಜೆ ಸಿಂಧು ತಮ್ಮ ತವರೂರು ಹೈದರಾಬಾದ್ಗೆ ತೆರಳಿದರು. ಅಲ್ಲೂ ಸಹ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.