
ನವದೆಹಲಿ(ನ.03): ಅಹಮದಾಬಾದ್ನಲ್ಲಿ ನಡೆದ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ಭಾರತ ತಂಡದ ಆಟಗಾರರಿಗೆ ತಲಾ 10 ಲಕ್ಷ ಬಹುಮಾನವನ್ನು ಸರ್ಕಾರದ ಪರವಾಗಿ ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಹೇಳಿದ್ದಾರೆ.
ಅನೂಪ್ ಕುಮಾರ್ ನೇತೃತ್ವದ ಭಾರತ ಕಬಡ್ಡಿ ತಂಡ ಪ್ರಶಸ್ತಿ ಸುತ್ತಿನಲ್ಲಿ 38-29 ಅಂಕಗಳಿಂದ ಇರಾನ್ ಎದುರು ಗೆಲುವು ಸಾಧಿಸಿ ಸತತ 3ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಆದರೆ, ಕಬಡ್ಡಿ ಆಟಗಾರರನ್ನು ನಿರ್ಲಕ್ಷಿಸಲಾಗಿದೆ ಎಂದು ಅನೂಪ್ ಬೇಸರ ತೋಡಿಕೊಂಡಿದ್ದರು.
ಇನ್ನು ಆಟಗಾರರಂತೆ, ಕೋಚ್ ಕೂಡ ಬಹುಮಾನ ಮೊತ್ತ ಪಡೆಯಲಿದ್ದಾರೆ. ದೇಶಿಯ ಕ್ರೀಡೆಯಾದ ಕಬಡ್ಡಿಯನ್ನು ಒಲಿಂಪಿಕ್ಸ್ ಕೂಟದಲ್ಲಿ ಸೇರಿಸುವತ್ತ ಚಿಂತಿಸಲಾಗುತ್ತಿದೆ ಎಂದು ಸಚಿವರಾದ ಗೋಯೆಲ್ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.