Wrestlers Protest ಒಂದೇ ಒಂದು ಆರೋಪ ಸಾಬೀತಾದರೆ ನೇಣಿಗೆ: ಬ್ರಿಜ್‌ಭೂಷಣ್ ಸವಾಲು!

Published : May 08, 2023, 07:58 AM IST
Wrestlers Protest ಒಂದೇ ಒಂದು ಆರೋಪ ಸಾಬೀತಾದರೆ ನೇಣಿಗೆ: ಬ್ರಿಜ್‌ಭೂಷಣ್ ಸವಾಲು!

ಸಾರಾಂಶ

ಜಂತರ್ ಮಂತರ್‌ನಲ್ಲಿ ಮುಂದುವರೆದ ಕುಸ್ತಿಪಟುಗಳ ಪ್ರತಿಭಟನೆ ಒಂದೇ ಒಂದು ಆರೋಪ ಸಾಬೀತು ಮಾಡಲಿ ಕುಸ್ತಿಪಟುಗಳಿಗೆ ಕುಸ್ತಿ ಸಂಸ್ಥೆ ಅಧ್ಯಕ್ಷನ ಸವಾಲು  

ನವದೆಹಲಿ(ಮೇ.08): ಕುಸ್ತಿಪಟುಗಳು ಹಾಗೂ ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ನಡುವಿನ ಹಗ್ಗಜಗ್ಗಾಟ ಕೊನೆಗೊಳ್ಳುವಂತೆ ಕಾಣುತ್ತಿಲ್ಲ. ಸವಾಲು-ಪ್ರತಿಸವಾಲು ಮುಂದುವರಿಯುತ್ತಿದ್ದು, ಇದೀಗ ಭೂಷಣ್‌ ವಿಡಿಯೋ ಸಂದೇಶವೊಂದರ ಮೂಲಕ ಮತ್ತೊಂದು ಸವಾಲು ಹಾಕಿದ್ದಾರೆ. ಭಾನುವಾರ ವಿಡಿಯೋವೊಂದನ್ನು ಹರಿಬಿಟ್ಟಿರುವ ಭೂಷಣ್‌, ‘ಪ್ರತಿಭಟನಾ ನಿರತ ಕುಸ್ತಿಪಟುಗಳು ತಾವು ಮಾಡಿರುವ ಆರೋಪಗಳ ಪೈಕಿ ಒಂದೇ ಒಂದು ಆರೋಪವನ್ನು ಸಾಬೀತು ಮಾಡಲಿ ಸಾಕು. ನಾನು ನೇಣು ಬಿಗಿದುಕೊಳ್ಳುತ್ತೇನೆ’ ಎಂದಿದ್ದಾರೆ.

‘ಪ್ರಕರಣವನ್ನು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಹೆಚ್ಚಿಗೆ ಮಾತನಾಡುವುದಿಲ್ಲ. ಕಳೆದ 11 ವರ್ಷದಲ್ಲಿ ದೇಶದಲ್ಲಿ ಕುಸ್ತಿ ಅಭಿವೃದ್ಧಿಗಾಗಿ ನಾನು ಏನೆಲ್ಲಾ ಮಾಡಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನ್ನ ವಿರುದ್ಧ ಯಾವುದಾದರೂ ವಿಡಿಯೋ, ಆಡಿಯೋ, ಸಾಕ್ಷ್ಯಗಳು ಇದ್ದರೆ ಪೊಲೀಸರಿಗೆ ನೀಡಲಿ’ ಎಂದು ಸವಾಲು ಹಾಕಿದ್ದಾರೆ.

ಕುಸ್ತಿಪಟುಗಳ ವಿರುದ್ಧ ಕೇಂದ್ರ ಸರ್ಕಾರ ಗರಂ!

ಬ್ರಿಜ್‌ಭೂಷಣ್‌ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ತಮ್ಮ ಪದಕ, ಪ್ರಶಸ್ತಿಗಳನ್ನು ವಾಪಸ್‌ ನೀಡುವುದಾಗಿ ಬೆದರಿಕೆ ಹಾಕಿರುವ ಕುಸ್ತಿಪಟುಗಳಾದ ಭಜರಂಗ್‌ ಪೂನಿಯಾ, ವಿನೇಶ್‌ ಫೋಗಾಟ್‌, ಸಾಕ್ಷಿ ಮಲಿಕ್‌ ಸೇರಿ ಇತರರ ವಿರುದ್ಧ ಕೇಂದ್ರ ಸರ್ಕಾರ ಗರಂ ಆಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸರ್ಕಾರ ಕಳೆದ 5 ವರ್ಷದಲ್ಲಿ ಕುಸ್ತಿಪಟುಗಳಿಗಾಗಿ 150 ಕೋಟಿ ರು.ಗೂ ಹೆಚ್ಚು ವೆಚ್ಚ ಮಾಡಿದೆ ಎಂದಿರುವ ಅಧಿಕಾರಿಯೊಬ್ಬರು, ವಿಸ್ತೃತ ವಿವರ ನೀಡಿದ್ದಾರೆ. 

Wrestlers Protest: ಈಗ ಕುಸ್ತಿ​ಪ​ಟು​ಗಳಿಂದ 2 ಸಮಿ​ತಿ!

‘ಸಾರ್ವಜನಿಕರ ತೆರಿಗೆ ಹಣದಿಂದ ಕುಸ್ತಿಪಟುಗಳಿಗೆ ಕೋಟ್ಯಂತರ ರುಪಾಯಿ ನೆರವು ನೀಡಲಾಗಿದೆ. ಕಳೆದ 5 ವರ್ಷದಲ್ಲಿ ಕುಸ್ತಿಪಟುಗಳ ಅಭ್ಯಾಸ, ತರಬೇತಿ, ಸ್ಪರ್ಧೆಗೆ 150 ಕೋಟಿ ರು.ಗೂ ಹೆಚ್ಚಿನ ಹಣ ಖರ್ಚು ಮಾಡಿದ್ದೇವೆ. ಭಜರಂಗ್‌ಗೆ 2.58 ಕೋಟಿ ರು., ವಿನೇಶ್‌ಗೆ 2.16 ಕೋಟಿ ರು. ನೆರವು ನೀಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾಜಿಸ್ಪ್ರೇಟ್‌ ಮುಂದೆ ಹೇಳಿಕೆ ದಾಖಲಿಸಿಲ್ಲ: ಸಾಕ್ಷಿ ಮಲಿಕ್

ಬ್ರಿಜ್‌​ಭೂಷಣ್‌ ವಿ​ರುದ್ಧ ದೂರು ನೀಡಿದ ಬಾಲ​ಕಿ​ಯರ ಹೇಳಿಕೆಯನ್ನೂ ಇನ್ನೂ ದಾಖ​ಲಿ​ಸಿಲ್ಲ. ಮ್ಯಾಜಿ​ಸ್ಪ್ರೇಟ್‌ ಮುಂದೆ ಅವರು ಹೇಳಿಕೆ ದಾಖ​ಲಿ​ಸ​ಬೇಕು. ಅದ​ಕ್ಕಾ​ಗಿಯೇ ನಾವು ಕಾಯು​ತ್ತಿ​ದ್ದೇವೆ. ಹೇಳಿಕೆ ದಾಖ​ಲಿ​ಸಿದ ಬಳಿಕ ಮುಂದಿನ ನಿರ್ಧಾರ ಕೈಗೊ​ಳ್ಳ​ಲಿ​ದ್ದೇವೆ. ನ್ಯಾಯ ಸಿಗು​ವ​ವ​ರೆಗೂ ಪ್ರತಿ​ಭ​ಟನೆ ನಿಲ್ಲ​ಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್‌ ಒತ್ತಾಯಿಸಿದ್ದಾರೆ.

ಬ್ರಿಜ್‌ ಬಂಧನಕ್ಕೆ ಮೇ 21ರ ಗಡುವು ಕೊಟ್ಟ ಕುಸ್ತಿಪಟುಗಳು!

ಬ್ರಿಜ್‌ಭೂಷಣ್‌ರನ್ನು ಮೇ 21ರೊಳಗೆ ಬಂಧಿಸದಿದ್ದರೆ ಪ್ರತಿಭಟನೆಯು ಉಗ್ರರೂಪ ಪಡೆಯಲಿದೆ ಎಂದು ಕುಸ್ತಿಪಟುಗಳು ಎಚ್ಚರಿಸಿದ್ದಾರೆ. ಮುಂದಿನ ನಡೆ ಬಗ್ಗೆ ನಿರ್ಧರಿಸಲು ರಚಿಸಿದ್ದ 31 ಸದಸ್ಯರ ಸಮಿತಿಯ ಸಲಹೆಯ ಮೇರೆಗೆ ಕುಸ್ತಿಪಟುಗಳು ಈ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಕುಸ್ತಿಪಟುಗಳಿಗೆ ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳಿಂದ ಬೆಂಬಲ ದೊರೆಯುತ್ತಿದ್ದು, ಭಾನುವಾರ 2000ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಯುತ್ತಿರುವ ಜಂತರ್‌-ಮಂತರ್‌ಗೆ ಭೇಟಿ ನೀಡಿದರು. 

ರೈತ ಮುಖಂಡ ರಾಕೇಶ್‌ ಟಿಕಾಯತ್‌ ಸೇರಿ ಹಲವರು ಪ್ರಮುಖರು ಭೇಟಿ ನೀಡಿ ಬ್ರಿಜ್‌ಭೂಷಣ್‌ ವಿರುದ್ಧ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿನೇಶ್‌ ಫೋಗಾಟ್‌, ‘ಪ್ರತಿಭಟನೆಯನ್ನು ಯಾರೂ ಹೈಜ್ಯಾಕ್‌ ಮಾಡಿಲ್ಲ’ ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು-ಮಡಿ ಪಂದ್ಯ!
ಟಿ20 ವಿಶ್ವಕಪ್ ಸೆಮಿಫೈನಲ್‌ ರೇಸ್‌ನಿಂದ ಶ್ರೀಲಂಕಾ ಔಟ್! ಕಿವೀಸ್ ಕನಸು ಜೀವಂತ