
ಬೆಂಗಳೂರು(ಸೆ.22): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಸರಣಿಯಲ್ಲಿ 1-0 ಮುನ್ನಡೆ ಪಡೆದಿರುವ ಟೀಂ ಇಂಡಿಯಾ ಅಂತಿಮ ಪಂದ್ಯದಲ್ಲೂ ಗೆಲುವಿನ ವಿಶ್ವಾಸದಲ್ಲಿದೆ. ಅಭಿಮಾನಿಗಳು ಈಗಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಧಾವಿಸುತ್ತಿದ್ದಾರೆ. ಇದೀಗ ಈ ಪಂದ್ಯಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಅಪರೂಪದ ದಾಖಲೆ ಬರೆಯಲು ಸಜ್ಜಾದ ಕೊಹ್ಲಿ!
ಮಹತ್ವದ ಟಿ20 ಪಂದ್ಯಕ್ಕೆ ಯಡಿಯೂರಪ್ಪ ಕೂಡ ಹಾಜರಾಗಲಿದ್ದಾರೆ. ಆದರೆ ಈ ಬಾರಿ ಸಿಎಂ ಪಂದ್ಯ ವೀಕ್ಷಣೆಗಿಂತ ವಿಶೇಷ ಮನವಿಯೊಂದಿಗೆ ಪ್ರತ್ಯಕ್ಷರಾಗುತ್ತಿದ್ದಾರೆ. ಯಡಿಯೂರಪ್ಪ, ಪ್ರವಾಹದಿಂದ ತತ್ತರಿಸಿರುವ ಕರ್ನಾಟಕವನ್ನು ಪುನರ್ ನಿರ್ಮಾಣಮಾಡಲು ಆರ್ಥಿಕ ನೆರವು ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಲಿದ್ದಾರೆ.
ಪಂದ್ಯ ಆರಂಭಕ್ಕೂ ಮುನ್ನ ಬಿಎಸ್ ಯಡಿಯೂರಪ್ಪ ಭಾರತ ಹಾಗೂ ಸೌತ್ ಆಫ್ರಿಕಾ ಕ್ರಿಕೆಟಿಗರ ಸಮ್ಮುಖದಲ್ಲಿ ವಿಶೇಷ ಮನವಿ ಮಾಡಲಿದ್ದಾರೆ. ಈ ಮೂಲಕ ನವ ಕರ್ನಾಯಕ ಕಟ್ಟಲು ಯುವ ಜನತೆ ಹಾಗೂ ಕ್ರಿಕೆಟ್ ಅಭಿಮಾನಿಗಳ ನೆರವು ಕೋರಲಿದ್ದಾರೆ. ಸೆ.22 ರ ಸಂಜೆ 7 ಗಂಟೆಗೆ ಅಂಟಿಮ ಟಿ20 ಪಂದ್ಯ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.